ಮಗು ಮ್ರತ ಪಟ್ಟಿದ್ದಾನೆ ವೈದ್ಯರು ಘೋಷಿಸಿ, ಅಜ್ಜಿ, ತಾಯಿ, ತಂದೆಯ ಕಾರಣದಿಂದ ಜೀವಂತವಾದನು. ಅಚ್ಚರಿ ಏನಿದು!?

JANANUDI.COM NETWORK

ಹರಿಯಾಣ: ಹರಿಯಾಣದ ಜಜ್ಜಾರ್​ ಜಿಲ್ಲೆಯ ಹಿತೇಶ್​ ಎಂಬುವವರ 7 ವರ್ಷದ ಮಗ ಕುನಾಲ್​ ಶರ್ಮಾನಿಗೆ ಕಳೆದ ತಿಂಗಳು ಟೈಫಾಯಿಡ್​ ಜ್ವರ ಕಾಣಿಸಿಕೊಂಡಿತ್ತು. ತೀವ್ರ ಅಸ್ವಸ್ಥನಾಗಿದ್ದ ಕುನಾಲ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗನ ಚೇತರಿಕೆಗಾಗಿ ಪಾಲಕರು ಆಸ್ಪತ್ರೆ ಬಾಗಿಲಲ್ಲೇ ಕಾಯುತ್ತಿದ್ದರು, ಆದರೆ ಮೇ 26ರಂದು ಮಗು ಮೃತಪಟ್ಟಿದೆ ಎಂದು ದೆಹಲಿ ವೈದ್ಯರು ಘೋಷಿಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ್ದರು.

     ಪಾಲಕರು ಕಣ್ಣೀರು ಹಾಕುತ್ತಲೇ ಸ್ವಗ್ರಾಮಕ್ಕೆ ಮೃತದೇಹ ತಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ದೂರದೂರಲ್ಲಿದ್ದ ಕುನಾಲ್​ನ ಅಜ್ಜಿ, ಮೊಮ್ಮಗನ ಅಂತಿಮ ದರ್ಶನ ಪಡೆಯಬೇಕೆಂದು ಹಠ ಹಿಡಿದಿದ್ದರಿಂದ ಅವರ ಬರುವಿಕೆಗಾಗಿ ಎಲ್ಲರೂ ಕಾಯುತ್ತಿದ್ದರು. ಈ ನಡುವೆ ಪವಾಡವೇ ನಡೆದಿದೆ.

ಗ್ರಾಮದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದಂತೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿತ್ತು. ಕಂದನ ದೇಹಕ್ಕೆ ತಲೆ ಚಚ್ಚಿಕೊಳ್ಳುತ್ತಾ ಕಣ್ಣೀರು ಸುರಿಸುತ್ತಿದ್ದ ತಾಯಿ, ‘ಮಗನೇ ಒಮ್ಮೆ ಕಣ್ಣುಬಿಡಪ್ಪಾ, ನಿನ್ನ ದಮ್ಮಯ್ಯ… ನನ್ನ ಬಿಟ್ಟು ಹೋಗ್ಬೇಡಾ…’ ಎಂದು ಕಂದನ ದೇಹವನ್ನ ಅಲ್ಲಾಡಿಸುತ್ತಾ ಪಾಲಕರು ಕಣ್ಣೀರು ಹಾಕುತ್ತಲೇ ಇದ್ದರು.

   ಕುನಾಲ್​ನ ಅಜ್ಜಿ, ಮೊಮ್ಮಗನ ಅಂತಿಮ ದರ್ಶನ ಪಡೆಯಬೇಕೆಂದು ಹಠ ಹಿಡಿದಿದ್ದರಿಂದರಿಂದ ಅಂತೀಮ ಕ್ರಿಯೆ ನಡೆಯಲು ತಡವಾಯಿತು. ಇತ್ನಮಧ್ಯೆ ಕುನಾಲ್ ತಾಯಿ ಅಳ್ಳುತ್ತಾ ಮಗನ ದೇಹದ ಮೇಲೆ ಬಿದ್ದು ಆಕ್ರಂದಿಸುತ್ತಿದ್ದರು. ಎದ್ದೇಳಪ್ಪಾ… ಕಂದಾ… ಅಮ್ಮನ ಮುಖ ನೋಡೋ… ಎಂದು ಮಗನ ದೇಹನ್ನೆಲ್ಲ ಸವರುತ್ತಾ ಎಳೆದಾಡಿದ್ದು, ಆ ವೇಳೆ ಆತನ ದೇಹದಲ್ಲಿ ಚಲನೆ ಕಂಡು ಬಂತು,

     ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಬಾಯಿಗೆ ಬಾಯಿ ಇಟ್ಟು ಉಸಿರು ಕೊಟ್ಟರು. ಆಗ ಮಗನ ದೇಹದಲ್ಲಿ ಮತ್ತಷ್ಟು ಮತ್ತಷ್ಟು ಚಲನ ಕಂಡು ಬಂದಿದ್ದು, ಎದೆಯ ಬಡಿತವೂ ಶುರುವಾಯಿತು. ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದ ಪಾಲಕರು ‘ಡಾಕ್ಟ್ರೇ ಮಗ ಬದುಕಿದ್ದಾನೆ, ದಯೆವಿಟ್ಟು​ ಉಳಿಸಿಕೊಡಿ ಎಂದು ಗೋಳಾಡಿದರು. ಪರೀಕ್ಷಿಸಿದ ವೈದ್ಯರು, ಮಗು ಬದುಕುವ ಸಾಧ್ಯತೆ ಶೇ.15 ಮಾತ್ರ ಎಂದು ಹೇಳಿದರೂ, ಪಾಲಕರು ಚಿಕಿತ್ಸೆ ಕೊಡಲು ಹೇಳಿದ್ದರು.

   ಆ ಬಾಲಕನಿಗೆ 20 ದಿನಗಳ ಕಾಲ ಚಿಕಿತ್ಸೆ ಕೊಟ್ಟಿದ್ದು, ಪವಾಡ ಎಂಬಂತೆ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಜೂ.15 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮಗು ಮನೆಯಲ್ಲಿ ಆರಾಮಾಗಿದೆ.