ಕೆಎಸ್ಸಾರ್ಟಿಸಿ ಬಸ್ ಸಂಚಾರ ನಾಳೆಯಿಂದ ಆರಂಭ: ಸುಮಾರು 3 ಸಾವಿರ ಬಸ್ ಗಳು ರಸ್ತೆಗಿಳಿಯಲಿವೆ

ಬೆಂಗಳೂರು ಜೂ. 20:  ಕೊವೀಡ್ 19 ರಾಜ್ಯದಲ್ಲಿ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಕೆಎಸ್ಸಾರ್ಟಿಸಿ ಮಾಹಿತಿಯ ಪ್ರಕಾರ ಕೆಎಸ್ಸಾರ್ಟಿಸಿ ಬಸ್ಗಳು ನಾಳೆಯಿಂದ ಸಂಚರಿಸಲಿವೆ ಎಂದು ತಿಳಿದು ಬಂದಿದೆ.

    ಮೈಸೂರು ಹೊರತುಪಡಿಸಿ ಜೂನ್ 21ರ ಬಳಿಕ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ನಾಳೆ ಸುಮಾರು 3 ಸಾವಿರ ಬಸ್ ಗಳು ರಸ್ತೆಗಿಳಿಯಲಿವೆ ಎಂದು ಮಾಹಿತಿ ಇದೆ.

    ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಅವಕಾಶ ನೀಡಲಾಗಿದೆ. ಮೈಸೂರು ಜಿಲ್ಲೆ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಾರ್ಗ ಸೂಚಿ ಸಡಿಲಿಕೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳನ್ನು ರಸ್ತೆಗಿಳಿಸು ಸಜ್ಜಾಗಿವೆ ಎಂದು ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರ ಪ್ರಕಟಣೆಯಲ್ಲಿ ತಿಳಿಸಿದೆ.