ಕಠಾರಿಪಾಳ್ಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕೊವಿಡ್-19 ಲಸಿಕಾ ಅಭಿಯಾನಕ್ಕೆ ಕೋಲಾರ ನಗರಸಭೆ ಅಧ್ಯಕ್ಷೆ ಶ್ವೇತ ಶಬರೀಶ್ ರವರು ಚಾಲನೆ ನೀಡಿದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಕೋಲಾರ:- ನಗರದ ಕಠಾರಿಪಾಳ್ಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕೊವಿಡ್-19 ಲಸಿಕಾ ಅಭಿಯಾನಕ್ಕೆ ಕೋಲಾರ ನಗರಸಭೆ ಅಧ್ಯಕ್ಷೆ ಶ್ವೇತ ಶಬರೀಶ್ ರವರು ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಮಂಜುನಾಥ್, ವಿಶ್ವೇಶ್ವರಯ್ಯ ಇಂಟರ್ ನಾಷನಲ್ ಶಾಲೆಯ ಕಾರ್ಯದರ್ಶಿ ಶಬರೀಶ್ ಯಾದವ್, ಮುಖಂಡರಾದ ಟಿಲ್ಲಿ ಮಂಜುನಾಥ್, ಮು.ರಾಘವೇಂದ್ರ, ಮಹೇಂದ್ರ ಗಾಣಿಗ, ಹರೀಶ್, ಅಂಚೆ ವಿಜಿ, ಆರೋಗ್ಯ ಇಲಾಖೆಯ ಶುಶ್ರೂಷಕಿ ಮಂಜುಳ, ಪುಷ್ಪ, ರೇಣುಕಾ, ಕಾವ್ಯಾ, ಆಶಾ ಕಾರ್ಯಕರ್ತೆ ಶಾಂತಿ ಮತ್ತಿತರರು ಭಾಗವಹಿಸಿದ್ದರು.
ಈ ಲಸಿಕಾ ಅಭಿಯಾನದಲ್ಲ್ಲಿ 18 ವರ್ಷ ಹಾಗೂ 45 ವರ್ಷ ಮೇಲ್ಪಟ್ಟ ನೂರಾರು ಮಂದಿಗೆ ಕೋವಿಶೀಲ್ಡ್ ಲಸಿಕೆ ಹಾಕಲಾಯಿತು.