ಕುಂದಾಪುರದ ಲಯನ್ಸ್ ಕ್ಲಬ್ ಆಶ್ರಯದಲ್ಲಿಅಂತರಾಷ್ಟ್ರೀಯ ವೈದ್ಯರ ದಿನಾಚರಣೆ

JANANUDI.COM NETWORK


ಕುಂದಾಪುರ: ಅಂತರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಗರದ ಹೆಸರಾಂತ ವೈದ್ಯರಾದ ಡಾ. ಚಂದ್ರಶೇಖರರವರನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್‍ನ ಮುಖಂಡರಾದ ಲ. ಚಂದ್ರಶೇಖರ ಕಲ್ಪತರು ಅವರು ವೈದ್ಯರನ್ನು ಸನ್ಮಾನಿಸುತ್ತಾ ಈ ಕೋವಿಡ್ ಸಂದರ್ಭದಲ್ಲಿ ವೈದ್ಯರು ತಮ್ಮನ್ನು ತಾವು ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡ ಬಗ್ಗೆ ಶ್ಲಾಘಿಸಿ ವೈದ್ಯರನ್ನು ಅಭಿನಂದಿಸಿದರು.
ಸನ್ಮಾನ ಸ್ವೀಕರಿಸಿದ ಡಾ. ಚಂದ್ರಶೇಖರರವರು ಮಾತನಾಡುತ್ತಾ ಈ ವೃತ್ತಿ ಅತೀ ಶ್ರೇಷ್ಠವಾದುದು ಈ ಮಾರಣ ಕೋವಿಡ್ ಸಂದರ್ಭದಲ್ಲೂ ಕೇವಲ ವೈದ್ಯರ ಸೇವೆ ಮಾತ್ರ ಪ್ರಮುಖವಲ್ಲ ಸಾರ್ವಜನಿಕರ ಜವಾಬ್ದಾರಿಯು ಮುಖ್ಯ ಎನ್ನುತ್ತಾ ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಕುಂದಾಪುರದ ಲಯನ್ಸ್ ಕ್ಲಬ್ ಮಾಡಿರುವ ಸೇವಾ ಚಟುವಟಿಕೆಗಳನ್ನು ಕೊಂಡಾಡಿದರು. ಲಯನ್ಸ್ ಕ್ಲಬ್ ಕುಂದಾಪುರದ ನೂತನ ಅಧ್ಯಕ್ಷರಾದ ರಾಧಾಕೃಷ್ಣ ನಾಯಕರವರು ವೈದ್ಯರಿಗೆ ತಮ್ಮ ಶುಭಶಯಗಳನ್ನು ಹೇಳಿದರು. ಲಯನ್ ನವೀನಕುಮಾರ ಶೆಟ್ಟಿ, ಪ್ರಜ್ಞೇಶ್ ಪ್ರಭು, ಡಾ. ರವೀಂದ್ರರವರು ಉಪಸ್ಥಿತರಿದ್ದರು.