ಯಡಿಯೂರಪ್ಪ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

JANANUDI.COM NETWORK


ಬೆಂಗಳೂರು,ಜು.26, ಇಂದು ನಡೆದ ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ.
ಇಂದು ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ,ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಭವನಕ್ಕೆ ಹೋಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.
ಶಿಕಾರಿಪುರದ ಜನತೆ ನನ್ನನ್ನು ಏಳು ಭಾರಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಜನತೆ ನನ್ನನ್ನು ಕೈಬಿಡಲಿಲ್ಲ. ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣವಾಗಿದ್ದಾರೆ ಎಂದು ಅವರು ಹೇಳಿದರು.
ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರಕ್ಕೆ ಅವಕಾಶ ಕೊಡುವುದಿಲ್ಲ, ಆದರೆ ಜೆ.ಪಿ. ನಡ್ಡಾ ಅವರು ನನಗೆ 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟರು. ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ದೇಶವನ್ನು ಮುನ್ನಡೆಸುವ ಅವಕಾಶ ಸಿಗಬೇಕು ಎಂದರು