ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿರುವ ಕೆ.ಪೂರ್ವಿಗೆ ಶಾಲಾ ವತಿಯಿಂದ ಸನ್ಮಾನ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಮಂಗಳವಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿರುವ ಭೈರವೇಶ್ವರ ವಿದ್ಯಾ ನಿಕೇತನದ ವಿದ್ಯಾರ್ಥಿನಿ ಕೆ.ಪೂರ್ವಿ ಅವರನ್ನು ಶಾಲೆ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಕಾರ್ಯದರ್ಶಿ ಎಂ.ಶ್ರೀರಾಮರೆಡ್ಡಿ, ನಿರ್ದೇಶಕ ಎ.ವೆಂಕಟರೆಡ್ಡಿ, ಬಾಲಕಿಯ ತಂದೆ ಕೃಷ್ಣಾರೆಡ್ಡಿ ಇದ್ದರು.