ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ 14-8-2021ರಂದು ಪಾದಯಾತ್ರೆ: ಅಶೋಕ್ ಕುಮಾರ್ ಕೊಡವೂರು

JANANUDI.COM NETWORK

ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಹಾಗೂ ಎಲ್ಲಾ ಮುಂಚೂಣಿ ಘಟಕಗಳ ಸಹಯೋಗದೊಂದಿಗೆ ತಾ. 14-8-2021ರಂದು ಶನಿವಾರ ಅಪರಾಹ್ನ ಗಂಟೆ 3.00ಕ್ಕೆ ಕಾಂಗ್ರೆಸ್ ಭವನದಿಂದ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರುಗಳಾದ ಶ್ರೀ ವಿನಯ ಕುಮಾರ್ ಸೊರಕೆ, ಶ್ರೀ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರುಗಳಾದ ಶ್ರೀ ಗೋಪಾಲ ಪೂಜಾರಿ,
ಪಾದಯಾತ್ರೆಯು ಜಿಲ್ಲಾ ಕಾಂಗ್ರೆಸ್ ಭವನದಿಂದ ಪ್ರಾರಂಭಗೊಂಡು ಬ್ರಹ್ಮಗಿರಿ-ಆಸ್ಪತ್ರೆ ರಸ್ತೆ, ಜೋಡುಕಟ್ಟೆ- ಕೋರ್ಟ್ ರಸ್ತೆ – ಕೆ.ಎಂ. ಮಾರ್ಗದ ಮೂಲಕ ಸರ್ವಿಸ್ ಬಸ್ ಸ್ಟ್ಯಾಂಡ್ ಕ್ಲಾಕ್ ಟವರ್, ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮುಖಾಂತರ ಸಮಾಪನಗೊಳ್ಳುವುದು.
ಈ ಪ್ರಯುಕ್ತ ಪಾದಯಾತ್ರೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಕಾರ್ಯಕರ್ತರು ಬಿಳಿ ವಸ್ತ್ರದಾರಿಗಳಾಗಿ ಆಗಮಿಸಬೇಕಾಗಿ ವಿನಂತಿಸುತ್ತೇವೆ.
ಪಾದಯಾತ್ರೆಯು ಕ್ಲಪ್ತ ಸಮಯದಲ್ಲಿ ಪ್ರಾರಂಭಗೊಳ್ಳುವುದರಿಂದ ಕಾರ್ಯಕರ್ತರು ಅರ್ಧಗಂಟೆಯ ಮೊದಲು ಕಾಂಗ್ರೆಸ್ ಭವನದಲ್ಲಿ ಸೇರತಕ್ಕದ್ದು’ ಎಂದು ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷರು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಾಧ್ಯಮಕ್ಕೆ ತಿಳಿಸಿದ್ದಾರೆ.