ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಕ್ತದಾನ ಶಿಬಿರ : ಯಶಸ್ವಿಗೆ ಪಾಪ್ಯುಲರ್ ಫ್ರಂಟ್ ಬ್ಲಡ್‍ಡೋನರ್ಸ್ ಪೋರಂ ಕರೆ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಕೋಲಾರ,ಆ.16: ದರ್ಗಾ ಮೊಹಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಾಪ್ಯುಲರ್ ಪ್ರಂಟ್ ಬ್ಲಡ್ ಪೋರಂ ವತಿಯಿಂದ ರಕ್ಷದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ರಕ್ತದಾನವು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಆದರೆ ಇಂದು ಸಕಾಲದಲ್ಲಿ ರಕ್ತ ದೊರಕದೆ ಅಸಂಖ್ಯಾತ ರೋಗಿಗಳು ಸಾವನ್ನಪ್ಪುತ್ತಿರುವ ಘಟನೆಗಳೂ ನಡೆಯುತ್ತಿರುತ್ತವೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು 1.2 ಕೋಟಿ ಯುನಿಟ್ ರಕ್ತದ ಅಗತ್ಯವಿದ್ದು, 1.1 ಕೋಟಿ ಮಾತ್ರ ಲಭ್ಯವಿದೆ. ಇಲ್ಲಿ 11.5 ಲಕ್ಷ ಯುನಿಟ್ ರಕ್ತದ ಕೊರತೆ ಇದೆ ಎಂದು ಸರಕಾರದ ಸಚಿವಾಲಯದ ವರದಿ ಹೇಳುತ್ತವೆ. ಕೋವಿಡ್ ನಂತರದ ದಿನಗಳಲ್ಲಿ ರಕ್ತದ ಸಂಗ್ರಹಣೆಯಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದೆ.
ದೇಶದಲ್ಲಿ ರಕ್ತದ ಕೊರತೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ರಕ್ತದಾನ ಕಾರ್ಯಕ್ಕೆ ಬಹಳಷ್ಟು ಮಹತ್ವ ನೀಡುತ್ತಾ ಬಂದಿದೆ. ಕಳೆದ ಎರಡು ದಶಕಗಳಿಂದಲೂ ಸಂಘಟನೆಯು ಜಾತಿ, ಮತ ಭೇದವಿಲ್ಲದೇ ರಕ್ತದಾನ ಶಿಬಿರ ಮತ್ತು ವೈಯಕ್ತಿಕ ರಕ್ತದಾನದ ಮೂಲಕ ತುರ್ತು ಸಂದರ್ಭಗಳಲ್ಲಿ ರಕ್ತ ಪೂರೈಕೆ ಮಾಡಿಜನರಜೀವ ಉಳಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಾ ಬರುತ್ತಿದೆ.
ಪಾಪ್ಯುಲರ್ ಫ್ರಂಟ್, ಮಾನವೀಯ ಸೇವೆಯನ್ನು ವ್ಯಾಪಕಗೊಳಿಸುವ, ರಕ್ತದಕೊರತೆ ನೀಗಿಸುವ, ಜನರಲ್ಲಿ ಜಾಗೃತಿ ಮೂಡಿಸಿ ಅವರನ್ನು ರಕ್ತದಾನಕ್ಕೆ ಪ್ರೇರೇಪಿಸುವ ಒಂದು ವಿಶಾಲ ಪರಿಕಲ್ಪನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಬ್ಲಡ್‍ಡೋನರ್ಸ್ ಫೆÇೀರಂ ಎಂಬ ರಾಷ್ಟ್ರ ಮಟ್ಟದ ವೇದಿಕೆಗೂ ಚಾಲನೆ ನೀಡಿದೆ. ಅದರಂತೆ ಕರ್ನಾಟಕದಲ್ಲಿಯೂ ಪಾಪ್ಯುಲರ್ ಫ್ರಂಟ್ ಬ್ಲಡ್‍ಡೋನರ್ಸ್ ಫೆÇೀರಂ ವೇದಿಕೆಯನ್ನು ರಚಿಸಲಾಗಿದೆ.
ಇದೀಗ ಜುಲೈ 15ರಿಂದ ಆಗಸ್ಟ್ 15ರ ವರೆಗೆ ರಾಜ್ಯಾದ್ಯಂತ ಬ್ಲಡ್‍ಡೋನರ್ಸ್ ಫೆÇೀರಂ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. 75ನೇ ಸ್ವಾತ್ರಂತ್ರ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ 75ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದ್ದು, 10 ಸಾವಿರ ಯುನಿಟ್ ರಕ್ತವನ್ನು ಸಂಗ್ರಹಿಸುವ ಗುರಿ ಹೊಂದಲಾಗಿದೆ. ರಕ್ತದಾನಿಗಳು ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡು ಈ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕು.
ಈ ಮೂಲಕ ಅಗತ್ಯ ಹಾಗೂ ತುರ್ತು ಸಂದರ್ಭಗಳಲ್ಲಿ ರಕ್ತದಕೊರತೆಯನ್ನು ನೀಗಿಸಲು ಮತ್ತು ಜನರ ಜೀವ ಉಳಿಸುವ ಮಾನವೀಯ ಸೇವೆಯಲ್ಲಿಕೈಜೋಡಿಸಬೇಕೆಂದು ತಿಳಿಸಿದ್ದಾರೆ.
ಜಿಲ್ಲಾಧ್ಯಕ್ಷ ಶೆಖ್ ಜಾಫರ್ ಸಾಧಿಕ್, ಕಾರ್ಯದರ್ಶೀ ಜುಬೇರ್ ಅಹಮದ್, ಜಿಲ್ಲಾ ಸಮಿತಿ ಸದಸ್ಯ ಸೈಯದ್ ನವಾಜ್, ಶಾರೂಕ್‍ಪಾಷ, ಇಂತಿಯಾಜ್‍ಪಾಷ ಉಪಸ್ಥಿತರಿದ್ದರು.