ತಾಡಿಗೋಳ್ ಯುವತಿಯೊಬ್ಬಳನ್ನು ಚುಡಾಯಿಸಿದ ಎನ್ನಲಾದ ಯುವಕನೊಬ್ಬನ ಮೇಲೆ ಹಲ್ಲೆ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ರಾಜ್ಯ ರಸ್ತೆ ಸಾರಿಗೆ ಬಸ್‍ನಲ್ಲಿ ಯುವಕರ ಗುಂಪೊಂದು, ಯುವತಿಯೊಬ್ಬಳನ್ನು ಚುಡಾಯಿಸಿದ ಎನ್ನಲಾದ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಿಂದ ಶ್ರೀನಿವಾಸಪುರಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‍ನಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ಯುಕನನ್ನು ಬಾಬು ಎಂದು ಗುರ್ತಿಸಲಾಗಿದೆ. ಬಾವು ಈ ಹಿಂದೆ ತಾಡಿಗೋಳ್ ಗ್ರಾಮಕ್ಕೆ ಸೇರಿದ ಯುವತಿಯೊಬ್ಬಳನ್ನು ಚುಡಾಯಿಸಿದ್ದ, ಹಾಗೆ ಮಾಡದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ ಯುವಕ ತನ್ನ ಚಟ ಮುಂದುವರಿಸಿದಾಗ, ಗ್ರಾಮದ ಕೆಲವು ಯುವಕರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಆಪಾದಿತ ಯುವಕನ್ನು ಹಿಗ್ಗಾ ಮುಗ್ಗಾ ಥಳಿಸಿದರು ಎಂದು ಹೇಳಲಾಗಿದೆ. ಹಲ್ಲೆ ನಡೆಸುತ್ತಿರುವ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೊಬ್ಬ ಯುವಕ ಹಾಗೂ ಯುವತಿ ಮೇಲೂ ಹಲ್ಲೆ ನಡೆಸಲಾಗಿದೆ. ಗೌನಿಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.