ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಕಿಡಿಗೇಡಿಗಳು ನಡೆಸಿರುವ ಹಲ್ಲೆಗೆ ಖಂಡನೆ

ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ

ಶ್ರೀನಿವಾಸಪುರ: ಎಸ್‍ಎಫ್‍ಐ, ಜನವಾದಿ ಮಹಿಳಾ ಸಂಘಟನೆ ಹಾಗೂ ದಲಿತ ಹಕ್ಕುಗಳ ಸಮಿತಿ ಸದಸ್ಯರು, ಈಚೆಗೆ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಕಿಡಿಗೇಡಿಗಳು ನಡೆಸಿರುವ ಹಲ್ಲೆಯನ್ನು ಖಂಡಿಸಿ ಮೆರವಣಿಗೆ ನಡೆಸಿದರು.
ಘಟನೆಯನ್ನು ಖಂಡಿಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನಿಲ್ಲಾ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್ ಮಾತನಾಡಿ, ವಿದ್ಯಾರ್ಥಿನಿಯರ ಮೇಲೆ ಪುಂಡರಿಂದ ನಡೆದಿರುವ ಹಲ್ಲೆ ಮಾನವೀಯ ಕೃತ್ಯ. ನಾಗರಿಕ ಸಮಾಜ ಈ ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸಬೇಕು ಎಂದು ಹೇಳಿದರು.
ಎಸ್‍ಎಫ್‍ಐ ಮುಖಂಡರಾದ ವಾಸುದೇವರೆಡ್ಡಿ, ಶ್ರೀಕಾಂತ್, ಸುರೇಶ್, ಅಂಕಿತ, ಉದಯ್ ಕುಮಾರ್, ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಭಾಗ್ಯಮ್ಮ, ಮಂಜುಳ, ಉಮಾದೇವಿ, ಮಂಜುಳ, ದಲಿತ ಹಕ್ಕುಗಳ ಸಮಿತಿ ಮುಖಂಡರಾದ ಪಿ.ತಂಗರಾಜ್, ಮುನಿವೆಂಕಟಪ್ಪ, ರಮಣ್, ವಿಶ್ವನಾಥ್, ಮಂಜುನಾಥ್, ವೆಂಕಟೇಶ್, ನಾಗೇಶ್ ಇದ್ದರು.