ಶ್ರೀನಿವಾಸಪುರ, ಹಸಿರು ಶಾಲು ಹಾಗೂ ರೈತ ಮುಖಂಡರ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಸದ ಎಸ್.ಮುನಿಸ್ವಾಮಿ ಕೂಡಲೇ ಕ್ಷೇಮಯಾಚಿಸ ಬೇಕು

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ, ಹಸಿರು ಶಾಲು ಹಾಗೂ ರೈತ ಮುಖಂಡರ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಸದ ಎಸ್.ಮುನಿಸ್ವಾಮಿ ಕೂಡಲೇ ಕ್ಷೇಮಯಾಚಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಎನ್. ಜಿ. ಶ್ರೀರಾಮರೆಡ್ಡಿ ಅಗ್ರಹಿಸಿದರು.
ಪಟ್ಟಣದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಕಛೇರಿಯಲ್ಲಿ ಸುದ್ದಿಗೊಷ್ಠಿಯನ್ನು ಏರ್ಪಡಿಸಿ ಮಾತನಾಡಿದ ಶ್ರೀರಾಮರೆಡ್ಡಿ ಇತ್ತೀಚಿಗೆ ಶಾಗೂತ್ತೂರು ಗ್ರಾಮದಲ್ಲಿ ನಡೆದ ಸಭೆಯಲ್ಲಿ ರೈತ ಸಂಘಟನೆಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಇವರಿಗೆ ಶೋಬೆ ತರವುದಿಲ್ಲ. ಹಸಿರು ಸಾಲು ಹಾಕಿಕೊಳ್ಳವವರು ರೈತರು ಅಲ್ಲ ಹೋರಾಟಗಾರರು ಹೊಲಗಳಿಗೆ ಹೋಗುವುದಿಲ್ಲ, ಕೆಲಸ ಮಾಡುವುದಿಲ್ಲ. ಕಛೇರಿಗೆಳಿಗೆ ಅಲೆದು ವೈಯುಕ್ತಿಕ ಕೆಲಸ ಮಾಡಿಕೊಳ್ಳುವುದರಲ್ಲಿ ನಿರತರಾಗಿತ್ತಾರೆ. ಎಂದಿರುವುದು ಖಂಡನೀಯ ಎಂದು ಕಿಡಿ ಕಾರಿದರು.
ನಮ್ಮ ರೈತ ಸಂಘಕ್ಕೆ ಇತಿಹಾಸ ಇದೆ 80 ರ ದಶಕದಿಂದ ನಮ್ಮ ಸಂಘ ಹೋರಾಟಗಳನ್ನು ಮಾಡಿಕೊಂಡು ರೈತರ ಸಮಸ್ಯೆಗಳ ಬಗ್ಗೆ ಹೋರಾಟಗಳನ್ನು ಮಾಡಿ ಬಂದಿದ್ದೇವೆ. ಸಂಸದರು ಸರಿಯಾಗಿ ಇತಿಹಾಸ ತಿಳಿದು ಮಾತನಾಡಲೀ ನಾವು ವ್ಯವಸಾಯ ಮಾಡಿಕೊಂಡೆ ಬಂದಿದ್ದೇವೆ. ಸಂದೇಹ ಇದ್ದರೆ ನಮ್ಮ ತೋಟಕ್ಕೆ ಬನ್ನಿ ಎಂದು ಸವಾಲನ್ನು ಹಾಕುತ್ತಾ ಸೋಮವಾರ ಒಳಗೆ ಸಂಸದರು ಕ್ಷೇಮೆಯಾಚಿಸಬೇಕು ಇಲ್ಲದಿದ್ದಲ್ಲಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಉಪಾಧ್ಯಕ್ಷ ಯಲವಕುಂಟೆ ಎಂ. ಬೈರಾರೆಡ್ಡಿ ಮಾತನಾಡಿ ಸಂಸದರು ಈ ಹಿಂದೆಯೆ ಸಹ ರೈತ ಸಂಘಟನೆಗಳ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರೂ ಇದೀಗ ಮತ್ತೊಮ್ಮೆ ತಾಲ್ಲೂಕಿನ ಶಾಗೂತ್ತೂರು ಗ್ರಾಮದಲ್ಲಿ ರೈತರ ಬಗ್ಗೆ ಮನ ಬಂದಂತೆ ಮಾತನಾಡಿದ್ದಾರೆ. ರೈತರ ಪರ ಎಂದು ವೇದಿಕೆಯಲ್ಲಿ ಭಾಷಣ ಮಾಡುವ ಮುನಿಸ್ವಾಮಿ ರೈತರ ಬಗ್ಗೆ ಕಿಚ್ಚತ್ತು ಕಾಳಜಿ ಇಲ್ಲ ಎಂದು ಕಿಡಿಕಾರಿದರು.
ಸಂಸದರೇ ಈ ದೇಶಕ್ಕೆ ಅನ್ನ ನೀಡುವ ರೈತನ ಬಗ್ಗೆ ಮಾತನಾಡುವ ಹಕ್ಕು ನಿಮಗೆ ಇಲ್ಲ ದೆಹಲಿಯಲ್ಲಿ ನಿರಂತರವಾಗಿ ರೈತರು ಹೋರಾಟ ಮಾಡುತ್ತಿದ್ದಾರೆ. ಇದರ ಬಗ್ಗೆ ಸಂಸತ್‍ನಲ್ಲಿ ಒಂದು ಬಾರಿಯಾದರು ದ್ವನಿಯತ್ತಿದ್ದೀರಾ ಬೆಳಗ್ಗೆ ಎದ್ದ ತಕ್ಷಣ ನಿಮ್ಮ ಮನೆಗೆ ಹಾಲು ಕೂಡುವ ರೈತರು ನಾವು ನಮ್ಮ ಬಗ್ಗೆ ಮಾತನಾಡುವ ಹಕ್ಕು ನಿಮಗೆ ಇಲ್ಲ ಕೇಂದ್ರ ಸರ್ಕಾರ ರೈತ ವಿರೋದಿ ಕಾಯೆಗಳನ್ನು ಜಾರಿಗೆ ತಂದು ರೈತರು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ಇದರ ಬಗ್ಗೆ ನಿಮಗೆ ಅರಿವು ಇದಿಯೇ ವಿನಾಕಾರಣ ಸಭೆ ಸಮಾರಂಭಗಳಲ್ಲಿ ರೈತರ ಬಗ್ಗೆ ಹಗುರವಾಗಿ ಮಾತನಾಡುವುದು ನಿಮ್ಮ ಘನತೆಗೆ ತಕ್ಕದ್ದಲ್ಲ ನೀವು ಯಾವ ರೀತಿ ರಾಜಕೀಯಕ್ಕೆ ಬಂದಿರಿ ನಮಗೆ ಗೊತ್ತಿದ್ದೆ ಇನ್ನಿತರ ವಿಚಾರಗಳ ಬಗ್ಗೆ ಮಾತನಾಡಬೇಕಾಗುತ್ತದೆ. ಈ ಜಿಲ್ಲೆಯ ಅಭಿವೃದ್ದಿ ಕಡೆ ಗಮನಹರಿಸುವುದನ್ನು ಬಿಟ್ಟು ಜಿಲ್ಲೆಯ ಜನರನ್ನು ದಿಕ್ಕು ತಪ್ಪಿಸುವ ಸಲುವಾಗಿ ರೈತರ ಮುಖಂಡರ ಬಗ್ಗೆ ಹಸಿರು ಶಾಲು ಹಾಕಿಕೊಳ್ಳುವುದರ ಬಗ್ಗೆ ಪದೇ ಪದೇ ಹಗುರವಾಗಿ ಮಾತನಾಡುತ್ತಿರುವುದು ನೋವು ತಂದಿದೆ ಎಂದು ಬೇಸರ ವ್ಯಕ್ಷಪಡಿಸುತ್ತಾ ಕೂಡಲೆ ಕ್ಷೇಮಯಾಚಿಸಬೇಕೆಂದು ಅಗ್ರಹಿಸಿದರು.
ಇದೇ ಸಂದರ್ಭದಲ್ಲಿ ಸುದ್ದಿಗೊಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ತಾಲ್ಲೂಕು ಕಾರ್ಯದರ್ಶಿ ಹೆಬ್ಬಟ ರಮೇಶ್, ಪ್ರಧಾನ ಕಾರ್ಯದರ್ಶಿ ಅಸ್ಲಾಂ ಪಾಷಾ, ಸ ಕಾರ್ಯದರ್ಶಿ ರಾಮಕೃಷ್ಣ ಇನ್ನಿತರರು ಹಾಜರಿದ್ದರು.