ಕೊರೊನಾ ವಿರುದ್ಧ ಲಸಿಕೆ ಅಭಿಯಾನದಲ್ಲಿ 100 ಕೋಟಿಗೂ ಹೆಚ್ಚಿನ ಡೋಸ್‍ಗಳನ್ನು ನೀಡುವುದರ ಮೂಲಕ ಭಾರತ ಮಹತ್ವದ ಸಾಧನೆ :ಡಾ. ಕೆ.ಎನ್.ವೇಣುಗೋಪಾಲ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಕೊರೊನಾ ವಿರುದ್ಧ ಲಸಿಕೆ ಅಭಿಯಾನದಲ್ಲಿ 100 ಕೋಟಿಗೂ ಹೆಚ್ಚಿನ ಡೋೀಸ್‍ಗಳನ್ನು ನೀಡುವುದರ ಮೂಲಕ ಭಾರತ ಮಹತ್ವದ ಸಾಧನೆ ಮಾಡಿದೆ ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ, ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಲಸಿಕೆ ಅಭಿಯಾನದಲ್ಲಿ 100 ಕೋಟಿಗೂ ಹೆಚ್ಚಿನ ಡೋೀಸ್‍ಗಳನ್ನು ನೀಡಿದ್ದಕ್ಕಾಗಿ, ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಸನ್ಮಾನಿಸಿ ಮತನಾಡಿದ ಅವರು, ದೇಶದಲ್ಲಿ ಕೋವಿಡ್-19 ವಿರುದ್ಧ ಲಸಿಕೆ ಕಾರ್ಯಕ್ರಮ ಆರಂಭವಾಗಿ 279 ದಿನ ಕಳೆದಿದೆ. ಈ ಅವಧಿಯಲ್ಲಿ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಿರುವುದು ಒಂದು ಮೈಲುಗಲ್ಲು ಎಂದು ಹೇಳಿದರು.
ತಾಲ್ಲೂಕು ವೈದ್ಯಾಧಿಕಾರಿ ಡಾ. ವಿಜಯ ಮಾತನಾಡಿ, ಕೋವಿಡ್ ವಿರುದ್ಧ ಕೈಗೊಳ್ಳಲಾಗಿರುವ ಲಸಿಕಾ ಅಭಿಯಾನ ನಿರೀಕ್ಷಿತ ಫಲ ನೀಡಿದೆಯಾದರೂ, ಇನ್ನೂ ಕೆಲವರು ಲಸಿಕೆ ಪಡೆಯಲು ಹಿಂಜರಿಯುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಸಿ.ವಿಜಯ, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ. ಜಿ.ಎಸ್.ಶ್ರೀನಿವಾಸ್, ಡಾ. ಉಮಾಶಂಕರ್, ಫಾರ್ಮಸಿ ಮುಖ್ಯಸ್ಥ ಮಹಮದ್ ಅಲಿ ಅವರನ್ನು ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು. ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.
ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಎ.ಅಶೋಕ್ ರೆಡ್ಡಿ, ಮುಖಂಡರಾದ ಜಯರಾಮರೆಡ್ಡಿ, ನಾರಾಯಣಸ್ವಾಮಿ, ಅಶೋಕ್ ರೆಡ್ಡಿ, ನಿಶಾಂತ್, ರಮೇಶ್, ವಿನೋದ್, ಮಹೇಶ್, ಸುರೇಶ್ ನಾಯಕ್, ರಾಮಾಂಜಿ, ಶೇಖ್ ಷಫಿವುಲ್ಲಾ, ಟಪ್ಪು ಖಾನ್, ಮುಬಾರಕ್ ಹಸನ್, ಅನ್ವರ್, ಸದ್ದಾಮ್ ಹುಸೇನ್, ಆಲಿ ಇಲಿಯಾಸ್, ಸಾದಿಕ್ ಇದ್ದರು.