ಪಡುಕೋಣೆಯಲ್ಲಿ ಸಾಫಲ್ಯಗೊಂಡ ಯೋಗ ಶಿಬಿರ

JANANUDI.COM NETWORK

ಪಡುಕೋಣೆ: ಸ್ಥಳೀಯ ಗ್ರಾಮಾಂತರ ಜನರ ಆರೋಗ್ಯವರ್ಧನೆಗಾಗಿ ಆಯುಷ್ಮಾನ್ ಇಲಾಖೆಯ ಸೂಚನೆಯ ಮೇರೆಗೆ ಅಕ್ಟೋಬರ್ 26 ನಾಡ ಪ್ರಾಥಮಿಕ ಆರೋಗ್ಯಕೇಂದ್ರದ ಪ್ರಾಯೋಜಕತ್ವದಲ್ಲಿ ಇಲ್ಲಿನ ಶ್ರೀ ಮಹಾವಿಷ್ಣು ದೇವಸ್ಥಾನದ ಶ್ರೀಮಹಾವಿಷ್ಣು ಕಲಾಮಂದಿರದಲ್ಲಿ ಆಯೋಜನೆಗೊಂಡ ಸರಳ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಅಕ್ಟೋಬರ್ 17ರಿಂದ ಪ್ರಾರಂಭವಾಗಿ 26 ರ ತನಕ 10 ದಿನಗಳ ಪರ್ಯಂತ ಶಿಬಿರಾರ್ಥಿಗಳಿಗೆ ತರಬೇತಿ ನಡೆದು, ಸಮಾರೋಪಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಪುರುಷೋತ್ತಮ ಅಡಿಗ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಪೂಜಾರಿ, ಆಶಾ ಕಾರ್ಯಕರ್ತೆ ಶೀಲಾವತಿ ದೇವಾಡಿಗ ಇವರಿಂದ ಉದ್ಘಾಟನೆಗೊಂಡು ಯೋಗ ಶಿಕ್ಷಕರಾದ ಶ್ರೀಯುತ ನಾರಾಯಣ ದೇವಾಡಿಗರ ದಿವ್ಯ ಮಾರ್ಗದರ್ಶನದಲ್ಲಿ ಶಿಬಿರಾರ್ಥಿಗಳು ಪ್ರಯೋಜನ ಪಡೆದುಕೊಂಡರು.” ಯೋಗ ಶಿಕ್ಷಕರು ನೀಡುವ ತರಬೇತಿ ಎಂಥವರಾದರೂ ಸರಳವಾಗಿ ಬೇಗ ಕಲಿಯಬಹುದು” ಎಂದು ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಗಣೇಶ ಹೆಬ್ಬಾರ್, ಮತ್ತು ಪ್ರಸಿದ್ಧ ಕಾರ್ಯಕ್ರಮ ನಿರೂಪಕರಾದ ಶಿಕ್ಷಕ ರಾಜೇಶ ಗಾಣಿಗ ರವರು ಉಪಸ್ಥಿತರಿದ್ದು ಕಾರ್ಯಕ್ರಮದ ಮೇಲ್ವಿಚಾರಣೆ,ನಿರೂಪಣೆ, ವಂದನಾರ್ಪಣೆ ಮಾಡಿದರು.