ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

JANANUDI.COM NETWORK

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ , ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಹಾಗೂ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜು ಮೂಡುಬೆಳ್ಳೆ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು .ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ದೀಪ ಬೆಳಗಿಸಿ ಉದ್ಘಾಟಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಜೋಸೆಫ್ ಡಿಸೋಜ ಇವರು ಸ್ವಾಗತಿಸಿ ಹಿರಿಯ ಉಪನ್ಯಾಸಕಿ ಶ್ರೀಮತಿ ಜೆಸಿಂತಾ ಲೋಬೊ ವಂದಿಸಿದರು. ನಂತರ ಪ್ರತಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕು, ಕರ್ತವ್ಯಗಳು, ಶಿಕ್ಷಣ ಹಕ್ಕು ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸಕರಾದ ಶ್ರೀಮತಿ ಜೆಸಿಂತಾ ಲೋಬೋ, ಶ್ರೀ ಜಡಭರತ ಶರ್ಮ, ಶ್ರೀಮತಿ ಸುಧಾ ಭಟ್ ಶ್ರೀಮತಿ ಅಲ್ವಿನ ಡಿಸೋಜಾ, ಶ್ರೀಮತಿ ಪ್ರಮಿತ ವೀರ ಮತ್ತು ಶ್ರೀಮತಿ ಶೃತಿ ಡಿಸೋಜಾ ಮಾಹಿತಿಯನ್ನು ನೀಡಿದರು.