ಭಂಡಾರ್ಕಾರ್ಸ್ ಕಾಲೇಜಿನಲ್ಲಿ 2021-22ನೇ ಸಾಲಿನ ಯೂತ್ ರೆಡ್‍ಕ್ರಾಸ್ ಸಂಸ್ಥೆಯ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

JANANUDI.COM NETWORK


ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ 2021-22ನೇ ಸಾಲಿನ ಯೂತ್ ರೆಡ್‍ಕ್ರಾಸ್ ಸಂಸ್ಥೆಯ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ಕಾರ್ಯಕ್ರಮವನ್ನು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಭಾಪತಿಗಳಾದ ಎಸ್.ಜಯಕರ ಶೆಟ್ಟಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್ .ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯೂತ್ ರೆಡ್‍ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಂಚಾಲಕರಾದ ಸತ್ಯನಾರಾಯಣ ಪುರಾಣಿಕ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಕಾರ್ಯದರ್ಶಿಗಳಾದ ವೈ.ಸೀತಾರಾಮ ಶೆಟ್ಟಿ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಖಜಾಂಚಿಗಳಾದ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಯೂತ್ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯಕ್ರಮ ಸಂಯೋಜಕರಾದ ಸತ್ಯನಾರಾಯಣ ಸ್ವಾಗತಿಸಿದರು. ಸಹ ಕಾರ್ಯಕ್ರಮ ಸಮಯೋಜಕರಾದ ವಿದ್ಯಾರಾಣಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಈ ಸಂದರ್ಭದಲ್ಲಿಕಾಲೇಜಿನಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ಸೌಮ್ಯಅವರಿಗೆಭಾರತೀಯರೆಡ್‍ಕ್ರಾಸ್ ಸಂಸ್ಥೆಯಕುಂದಾಪುರಘಟಕದ ವತಿಯಿಂದ ಶೈಕ್ಷಣಿಕಉದ್ದೇಶಕ್ಕಾಗಿಆರ್ಥಿಕ ಸಹಾಯವನ್ನು ಮಾಡಲಾಯಿತು.