ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕರಾಗಿ ಬಿ.ಹಾರೂನ್ ಸಾಹೇಬ್

ವರದಿ : ಮಝರ್, ಕುಂದಾಪುರ

ಕುಂದಾಪುರ:ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಬಿ.ಹಾರೂನ್ ಸಾಹೇಬ್ ನೇಮಕ ಗೊಂಡಿದ್ದಾರೆ. ವಿಧಾನ ಪರಿಷತ್ ಸದಸ್ಯ,ಮಾಜಿ ಸಭಾಪತಿ ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವರ ಸೂಚನೆಯ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿ ನಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಅನುಮೋದನೆಯ ಮೂಲಕ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಲ್ಪ ಸಂಖ್ಯಾತ  ಉಪಾಧ್ಯಕ್ಷರಾಗಿ ನೇಮಿಸಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಜನಾಬ್ ಇಸ್ಮಾಯಿಲ್ ಆತ್ರಾಡಿ ಆದೇಶಿಸಿದ್ದಾರೆ . ಏಳವೆಯಿಂದಲೂ ಕಟ್ಟಾ ಕಾಂಗ್ರೆಸ್ ಕಾರ್ಯಕರ್ತ ನಾಗಿ ಗುರುತಿಸಿ ಕೊಂಡಿರುವ ಹಾರೂನ್ ಸಾಹೇಬರು ಮಾಜಿ ಪುರಸಭಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ