ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಲಸಿಕಾ ಅಭಿಯಾನ.

JANANUDI.COM NETWORK

ಕೇಂದ್ರ ಮತ್ತು ರಾಜ್ಯ‌ ಸರಕಾರಗಳ ಮಹತ್ತರ ಗುರಿಯಾದ 15-18 ವಯೋಮಾನದವರಿಗೆ ಕನಿಷ್ಠ ಅವಧಿಯಲ್ಲಿ ಗರಿಷ್ಠ ಪ್ರಮಾಣದ ಲಸಿಕೆ ನೀಡುವಿಕೆ, ಆ ಮೂಲಕ ಕೋವಿಡ್ ಮತ್ತು ಓಮಿಕ್ರಾನ್ ಸಾಂಕ್ರಾಮಿಕಗಳ ತಡೆಯಲ್ಲಿ ರಕ್ಷಾಕವಚವಾಗುವ ವ್ಯಾಕ್ಸಿನೇಶನ್  ಅಭಿಯಾನ‌ದ ಅಂಗವಾಗಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕೋವಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಲಯನ್ಸ್ ಕ್ಲಬ್, ಕುಂದಾಪುರ, ಇದರ ಅಧ್ಯಕ್ಷರಾದ ಲಯನ್ ರಾಧಾಕೃಷ್ಣ ನಾಯಕ್ ರವರು ಕಾಲೇಜಿನ ಲಸಿಕಾ ಅಭಿಯಾನಕ್ಕೆ ದೀಪ ಬೆಳಗುವುದರ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು.

ತಾಲೂಕು ಸಾರ್ವಜನಿಕ ಉಪವಿಭಾಗೀಯ ಆಸ್ಪತ್ರೆ, ಕುಂದಾಪುರ, ಇಲ್ಲಿಯ ವೈದ್ಯಾಧಿಕಾರಿ ಡಾ. ಕವಿತಾರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ. ಬಿ ಯವರು ಧನ್ಯವಾದ ಸಲ್ಲಿಸಿದರು. ಹಿಂದಿ ವಿಭಾಗ ಮುಖ್ಯಸ್ಥೆ ಶ್ರೀಮತಿ ಜಯಶೀಲಾ ಪೈಯವರು ಕಾರ್ಯಕ್ರಮ ನಿರೂಪಿಸಿದರು.