ಪ್ರಧಾನಿ ಮೋದಿಜೀಯವರ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಭದ್ರತಾ ವೈಫಲ್ಯ ಖಂಡಿಸಿ ಕುಂದಾಪುರದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಪ್ರತಿಭಟನೆ

ವರದಿ : ಕೃಷ್ಣಮೂರ್ತಿ ಡಿಬಿ

ಕುಂದಾಪುರ, ಪ್ರಧಾನಿ ಶ್ರೀ ನರೇಂದ್ರ ಮೋದಿಜೀಯವರ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಭದ್ರತಾ ವೈಫಲ್ಯ ಸಂಭವಿಸಿದ್ದು, ಪಂಜಾಬ್ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಮತ್ತು ಸಚಿವರಾದ ಕಾರಜೋಳರನ್ನು ಕುರಿತು ಕಾಂಗ್ರೆಸ್ ಮುಖಂಡರು ಅವಹೇಳನಕಾರಿ ಶಬ್ದಗಳನ್ನು ಬಳಸಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಉಡುಪಿ ಜಿಲ್ಲೆ ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಕಪ್ಪು ಪಟ್ಟಿ ಧರಿಸಿ , ಅಂಬೇಡ್ಕರ್ ಭಾವಚಿತ್ರದ ಎದುರು ಮೌನ ಪ್ರತಿಭಟನೆ ಮಾಡಲಾಯಿತು.
ಉಡುಪಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಶ್ರೀ ಗೋಪಾಲ ಕಳಂಜಿ, ಕುಂದಾಪುರ ಮಂಡಲ ಅಧ್ಯಕ್ಷರಾದ ಶ್ರೀ ಶಂಕರ ಅಂಕದಕಟ್ಟೆ, ಉಡುಪಿ ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೃಷ್ಣಮೂರ್ತಿ ಡಿಬಿ ಹಾಗೂ ಸದಾನಂದ ಕೈಪುಂಜಾಲು ಪುರಸಭಾ ಸದಸ್ಯರಾದ ಪ್ರಭಾಕರ, ಕುಂದಾಪುರ ಮಂಡಲ ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಶ್ರೀ ಮಹೇಶ್ ಕಾಳವರ ಮತ್ತು ಬೈಂದೂರು ಮಂಡಲ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸುರೇಶ ಮೂಡುಬಗೆ ಉಪಸ್ಥಿತರಿದ್ದರು
.