ಸಂತ ಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

JANANUDI.COM NETWORK

ಮೂಡುಬೆಳ್ಳೆ : ಇಲ್ಲಿಯ ಸಂತ ಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ, ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು .ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಿರ್ವ ಸಂತ ಮೇರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಗುಲಾಬಿ ಪೂಜಾರಿ ಭಾಗವಹಿಸಿ ” ಸ್ವಾಮಿ ವಿವೇಕಾನಂದರ ಜೀವನ ನಮ್ಮೆಲ್ಲರಿಗೂ ಸದಾ ಪ್ರೇರಣೆ. ಇಂದಿನ ಯುವ ಜನಾಂಗ ಸ್ವಾಮಿ ವಿವೇಕಾನಂದರ ವಾಣಿಗಳಿಂದ ಪ್ರೇರಿತರಾಗಿ ಸದೃಢ ರಾಷ್ಟ್ರ ನಿರ್ಮಾಣವನ್ನು ಮಾಡಲು ಮಾಡುವತ್ತ ಮುನ್ನಡೆಯಬೇಕು” ಎಂದು ಸಂದೇಶ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಜೋಸೆಫ್ ಡಿಸೋಜ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರೌಢಶಾಲಾ ವಿಭಾಗದ ಶಿಕ್ಷಕ ಜಾನ್ ಕ್ಯಾಸ್ಟಲಿನೊ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಪದವಿಪೂರ್ವ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಶ್ರೀಮತಿ ಜೆಸಿಂತಾ ನತಾಲಿಯಾ ಲೋಬೋ ಸ್ವಾಗತಿಸಿ ,ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಶ್ರೀಮತಿ ಸುನೀತಾ ಕಾಮತ್ ವಂದಿಸಿದರು.