ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಲ್ ಸೆಟ್ಟಿಂಗ್’ ಕುರಿತು ತರಬೇತಿ

JANANUDI.COM NETWORK

ಜೆ.ಸಿ.ಐ ಕುಂದಾಪುರ ಸಿಟಿ ಇದರ ಯುವ ಸಪ್ತಾಹದ ಎರಡನೇ ದಿನದಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯ ಅಂಗವಾಗಿ ಜೀವನದಲ್ಲಿ ‘ ಗೋಲ್ ಸೆಟ್ಟಿಂಗ್’ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಖ್ಯಾತ ನ್ಯಾಯವಾದಿ ಶ್ರೀ ಟಿ. ಬಿ. ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉದ್ದೇಶಿತ ಗುರಿ ಸಾಧಿಸಲು ಅಗತ್ಯವಿರುವ ಸಮ-ಧೃಢ ಚಿತ್ತದ ಬಗ್ಗೆ ತಿಳಿಸಿದರು. . ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷರಾದ ಜೆ.ಸಿ ಅಭಿಲಾಷ್ ರವರು ಸ್ವಾಮಿ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಚಿತ್ರಪಟಕ್ಕೆ ಪುಷ್ಪಾಂಜಲಿ ಸಲ್ಲಿಸಲಾಯಿತು. ಜೆ.ಸಿ.ಐ ಕುಂದಾಪುರ ಸಿಟಿಯ ಸ್ಥಾಪಕಾಧ್ಯಕ್ಷರೂ, ಯುವ ಸಪ್ತಾಹ ಕಾರ್ಯಕ್ರಮದ ಪ್ರಾಜೆಕ್ಟ್ ಡೈರೆಕ್ಟರ್ ಜೆ.ಸಿ. ಹುಸೇನ್ ಹೈಕಾಡಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಶ್ರೀ ಸಂದೀಪ್ ಪೂಜಾರಿಯವರು ಅತಿಥಿಗಳನ್ನು ಪುಷ್ಪ ನೀಡಿ ಸ್ವಾಗತಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಶ್ರೀಮತಿ‌ ಜಯಶೀಲಾ ಪೈ ಯವರು ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆಗೈದರು.