ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಕೊನೆಗೊಳ್ಳುವ ಮುನ್ಸೂಚನೆ

JANANUDI.COM NETWORK


ಬೆ0ಗಳೂರು, ಜ.1: ವಿವಿಧ ವಲಯಗಳಿಂದ ತೀವ್ರ ವಿರೋಧವಾದ ಹಿನ್ನೆಲೆಯಲ್ಲಿ ಈಗ ರಾಜ್ಯದಲ್ಲಿ ಜಾರಿಯಲ್ಲಿ ಇರುವ ವಾರಾಂತ್ಯ ಕರ್ಫ್ಯೂ ಬಹುತೇಕ ಕೊನೆಗೊಳ್ಳುವ ಸಾಧ್ಯತೆ ಇದೆಯೆಂದು ಹೇಳಲಾಗುತ್ತದೆ.
ಬೆ0ಗಳೂರಿನಲ್ಲಿ ಇಂದು ಮಾತನಾಡಿದ ಮುಖ್ಯಮಂತ್ರಿ ಬಸವ ರಾಜ್ ಬೊಮ್ಮಾಯಿ, ಈ ಕುರಿತು, ತಜ್ಞರ ವರದಿ ಪರಿಶೀಲಿಸಿ ಶುಕ್ರವಾರ ಅಂತಿಮ ತೀರ್ಮಾನ ತೆಗದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೊರೋನಾ ಮೂರನೆ ಅಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ತೀರಾ ಕಡಿಮೆಯಿದ್ದು. ಈ ಎಲ್ಲ ಅ0ಶಗಳನ್ನು ಪರಿಗಣಿಸಿ ಒಂದು ತೀರ್ಮಾನಕ್ಕೆ ಬರಲಾಗುವುದು ಎ0ದು ಅವರು ತಿಳಿಸಿದ್ದಾರೆ.

ಇದೇ ವೇಳೆ ಸಚಿವ ಸುಧಾಕರ್ ಕೂಡ ವಾರಾಂತ್ಯ ಕರ್ಫ್ಯೂ ಕೊನೆಗೊಳ್ಳುವ ಸುಳಿವು ನೀಡಿದ್ದಾರೆ. ಇದೇ ವೇಳೆ ಅವರು ಜನರ ಪ್ರಾಣ ರಕ್ಷಣೆ ಮೊದಲ ಆದ್ಯತೆ ಎ0ದು ಸಚಿವ ಸುಧಾಕರ್ ಹೇಳಿದ್ದಾರೆ.