ಕುಂದಾಪುರ: ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೊತ್ಸವ

JANANUDI.COM NETWORK

ಕುಂದಾಪುರ, 73 ನೇ ಗಣರಾಜ್ಯೋತ್ಸವದ ಆಚರಣೆಯ ಅಂಗವಾಗಿ  ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾದ ಶ್ರಿ ನವೀನ ಕುಮಾರ ಶೆಟ್ಟಿಯವರು ಧ್ವಜಾರೋಹಣಗೈದು, ಸಮಾನತೆ ಮತ್ತು ಪ್ರಜಾಪ್ರಭುತ್ವದ ತತ್ವಗಳು ಅಂತರ್ಗತವಾಗಿದ್ದು, ಪ್ರಪಂಚದಲ್ಲೇ ಅತ್ಯಂತ ಶ್ರೇಷ್ಠವೆನಿಸಿಕೊಳ್ಳುವ ಭಾರತದ ಸಂವಿಧಾನ‌ ಮತ್ತು ಗಣತಂತ್ರ ಮೌಲ್ಯಗಳನ್ನು ನಾವೆಲ್ಲರೂ ಒಗ್ಗಟ್ಟಿನ ಮೂಲಕ ಸಮರ್ಪಕವಾಗಿ ಅನುಷ್ಠಾನಕ್ಕೆ  ತರಬೇಕೆಂದು ಕರೆ ನೀಡಿದರು.

ಸಂವಿಧಾನದ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ರವರ ಚಿತ್ರಪಟಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಶ್ರಿ ಕೃಷ್ಣಮೂರ್ತಿ ಡಿ. ಬಿ ಯವರು ಭಾರತದ ಸಂವಿಧಾನದ ಹಿರಿಮೆಯ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಮ್ ಶೆಟ್ಟಿಯವರು ಕಾರ್ಯಕ್ರಮವನ್ನು ನಿರ್ವಹಿಸಿದರು.