ಪ್ರೇಮದಲ್ಲಿ ಶಂಕೆ – ಪ್ರಿಯತಮೆ ಸಮುದ್ರಕ್ಕೆ ಜಿಗಿತ – ರಕ್ಷಿಸಲು ಸಮುದ್ರಕ್ಕೆ ಜಿಗಿದ ಪ್ರಿಯತಮ ದಾರುಣ ಸಾವು.

JANANUDI.COM NETWORK


ಉಳ್ಳಾಲ, ಸಮುದ್ರಕ್ಕೆ ಜಿಗಿದ ಪ್ರಿಯತಮೆಯನ್ನು ರಕ್ಷಿಸಲು ಸಮುದ್ರಕ್ಕೆ ಜಿಗಿದ ಪ್ರಿಯತಮ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.
ಮೃತರನ್ನು ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ (28) ಯಾನೆ ಲಾಯ್ ಎಂದು ಗುರುತಿಸಲಾಗಿದೆ.
ಕೋಟೆಕಾರು ಪಾಣೀರು ನಿವಾಸಿ ಅಶ್ವಿತಾ ಫೆರಾವೊ (22) ಅವರು ಆತ್ಮಹತ್ಯೆಗೆ ಯತ್ನಿಸಿ ಸೋಮೇಶ್ವರದಲ್ಲಿ ಶುಕ್ರವಾರ ಸಂಜೆ ಸಮುದ್ರಕ್ಕೆ ಹಾರಿದ್ದರು. ಇವಳನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ ಲಾಯ್ಡ್ ಮ್ರತಪಟ್ಟಿದ್ದಾರೆ.
ಕರಾವಳಿ ಕಾವಲು ಪಡೆಯವರು ಯುವತಿಯನ್ನು ರಕ್ಷಿಸುವಲ್ಲಿ ಸಫಲರಾಗಿದ್ದು ಅಶ್ವಿತಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಅರೆಂದು ತಿಳಿದು ಬಂದಿದೆ.
ಲಾಯ್ಡ್ ಡಿಸೋಜ ಮತ್ತು ಅಶ್ವಿತಾ ಹಲವು ವರುಷಗಳಿಂದ ಪ್ರೇಮಿಗಳಾಗಿದ್ದರು. ಈ ನಡುವೆ ಲಾಯ್ಡ್ ಅವರಿಗೆ ಬೇರೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಇದೆ ಎಂಬುದು ಅಶ್ವಿತಾ ಆರೋಪವಾಗಿದ್ದು.ಇದರ ಕುರಿತು ಮಾತುಕತೆಗಾಗಿ ಶುಕ್ರವಾರ ಸಂಜೆ ಪ್ರೇಮಿಗಳಿಬ್ಬರು ಸೋಮೇಶ್ವರ ಕಡಲ ಕಿನಾರೆಯಲ್ಲಿ ಸೇರಿದ್ದರು, ಇವರ ಜೊತೆ ಸಂಬಂಧಿಕರೂ ಇದ್ದರು. ಮಾತು ಕತೆ ವೇಳೆ ಲಾಯ್ಡ್ ಮತ್ತು ಅಶ್ವಿತಾಳ ಮಧ್ಯೆ ಮಾತಿನ ಜಕಮುಖಿ ನಡೇದು ಅಶ್ವಿತಾ ಏಕಾಏಕಿ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿದ್ದರೆನ್ನಲಾಗಿದೆ. ಅವರನ್ನು ರಕ್ಷಿಸಲೆಂದು ಲಾಯ್ಡ್ ಕೂಡಾ ಸಮುದ್ರಕ್ಕೆ ಜಿಗಿದಿದ್ದಾರೆ. ಆದರೆ ಅವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಶ್ವಿತಾ ರಕ್ಷಿಸಲ್ಪಟ್ಟಿದ್ದಾಳೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಕರಾವಳಿ ಕಾವಲು ಪಡೆಯ ಮೋಹನ್ ಚಂದ್ರ, ಸುಜಿತ್, ಅಶೋಕ್ ಸೋಮೇಶ್ವರ, ಮೀನುಗಾರರಾದ ಕಲ್ಪೇಶ್ ಹಾಗೂ ಗಿರೀಶ್ ಸಮುದ್ರಪಾಲಾದವರನ್ನು ಹರಸಾಹಸಪಟ್ಟು ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ದುರಾದ್ರಷ್ಟಾವಶತ್ ಲಾಯ್ಡ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.