ಇಸ್ಲಾಂ ವಿದ್ಯಾರ್ಥಿಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿದಕ್ಕೆ ಅಮಾನತಾದ ಶಾಲಾ ಮುಖ್ಯೋಪಾಧ್ಯಾಯಿನಿಯ ಅಮಾನತನ್ನು ಮುಖ್ಯಮಂತ್ರಿ ರದ್ದು ಮಾಡಿದರು

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಸೋಮೇಶ್ವರ ಪಾಳ್ಯದ ಬಳೆ ಚಂಗಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಇಸ್ಲಾಂ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶಾಲಾ ಆವರಣದಲ್ಲಿ ಅವಕಾಶ ಕಲ್ಪಿಸಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಎಸ್ ಎಂ ಉಮಾದೇವಿ ಯವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಪಡಿಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡ ಶಾಲಾ ಮುಖ್ಯೋಪಾಧ್ಯಾಯಿನಿ ಉಮಾದೇವಿ ಯವರ ಅಮಾನತು ಆದೇಶವನ್ನು ರದ್ದು ಪಡಿಸಲು ಕೋರಿ ಭಾರತೀಯ ದಲಿತ ಒಕ್ಕೂಟ ದ ರಾಜ್ಯಾಧ್ಯಕ್ಷ ರಾದ ಕೆ ಎಂ ಅನಂತಕೀರ್ತಿ ರವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಯವರು ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ದೇವಿ ರವರ ಅಮಾನತು ಆದೇಶವನ್ನು ರದ್ದು ಪಡಿಸಲು ಸರ್ಕಾರದ ಕಾರ್ಯದರ್ಶಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ರವರಿಗೆ ಸೂಚಿಸಿದ್ದಾರೆ.