ಕ. ಪ್ರ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಧ್ರುವನಾರಾಯಣ ಪಕ್ಷ ಸಂಘಟನೆ,ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆಗೆ ಆಗಮನ

JANANUDI.COM NETWORK

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಮೈಸೂರು ವಿಭಾಗದ ಉಸ್ತುವಾರಿಗಳಾದ ಶ್ರೀ ಧ್ರುವನಾರಾಯಣರವರು ದಿನಾಂಕ 20-02-2022 ಆದಿತ್ಯವಾರ ಮದ್ಯಾಹ್ನ 3 ಗಂಟೆಗೆ ಕುಂದಾಪುರ ಆರ್ ಎನ್ ಶೆಟ್ಟಿ ಸಭಾಂಗಣದ ಮಿನಿಹಾಲ್ ನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷ ಸಂಘಟನೆ ಮತ್ತು ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ , ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರವರು ಹಾಗೂ ಪಕ್ಷದ ಮುಖಂಡರು ಆಗಮಿಸಲಿದ್ದಾರೆ.
ಈ ಸಂಧರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರು ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ,ಸದಸ್ಯತ್ವ ಅಭಿಯಾನದ ಜಿ.ಪo.ಮುಖ್ಯ ನೋಂದಣಿಕಾರರು ಮತ್ತು ಬೂತ್ ನೊಂದಣಿಕಾರರು ಆಗಮಿಸಬೇಕಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವಿನಂತಿಸಿಕೊಂಡಿದೆ.