ಸಚಿವ ಅಶೋಕ್ ಆಚಾರವಿಲ್ಲದ ನಾಲಿಗೆಯುಳ್ಳ ನೀಚ ಬುದ್ದಿ ಬಿಡದ ವ್ಯಕ್ತಿ : ದ್ರುವನಾರಾಯಣ್

JANANUDI.COM NETWORK


ಕುಂದಾಪುರ, ಫೆ.20: ಸಚಿವ ಅಶೋಕ್ ಅವರದ್ದು ಆಚಾರವಿಲ್ಲದ ಮತ್ತು ನೀಚ ಬುದ್ದಿ ಬಿಡದ ನಾಲಿಗೆ ಆಗಿದೆಯೆಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದ್ರುವನಾರಾಯಣ್ ಅವರು ದೂರಿದರು.
ಅವರು ಇಂದು ಕುಂದಾಪುರದ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆದ ಕುಂದಾಪುರ ಮತ್ತು ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿ ಪರಿಶೀಲನೆ ಮತ್ತು ತರಬೇತಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡುತ್ತಾ ಸಚಿವ ಆರ್. ಅಶೋಕ್ ರವರು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕುರಿತು ‘ಗೂಂಡಾ’ ಮತ್ತು ‘ಜಾತಿವಾದಿ’ ಎಂಬ ಪದಬಳಕೆ ಮಾಡಿರುವುದು ಖಂಡನೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದ್ರುವನಾರಾಯಣ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಂದಾಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನವೀನ್ ಡಿಸೋಜಾ ಡಿಜಿಟಲ್ ಸದಸ್ಯತ್ವ ನೋಂದಣಿ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ತರಭೇತಿದಾರರಾದ ಶರ್ಲಿ ಐವನ್ ರವರು ಡಿಜಿಟಲ್ ಸದಸ್ಯತ್ವ ನೋಂದಣಿ ಕುರಿತು ವಿವರಣೆ ನೀಡಿದರು.
ವೇದಿಕೆಯಲ್ಲಿ ಹಿರಿಯ ನಾಯಕ ಮಲ್ಯಾಡಿ ಶಿವರಾಮ ಶೆಟ್ಟಿ, ಮುಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಪ್ರತಿಭಾ ಕುಳಾಯಿ, ಕೆದೂರು ಸದಾನಂದ ಶೆಟ್ಟಿ, ಜಯರಾಮ ನಾಯ್ಕ್, ಪಿ.ದೇವಕಿ, ಬೀಜಾಡಿ ಅಶೋಕ್ ಪೂಜಾರಿ, ಬಿ. ಹಿರಿಯಣ್ಣ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಬೆಳ್ವೆ ಸತೀಶ್ ಕಿಣಿ, ಇಚ್ಚಿತಾರ್ಥ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪುರ ಬ್ಲಾಕ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಹಾಗೂ ಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಸ್ವಾಗತಿಸಿದರು. ವಿನೋದ್ ಕ್ರಾಸ್ಟೋ ಕಾರ್ಯಕ್ರಮ ನಿರೂಪಿಸಿದರು
.