ಯುವಕನ ಕೊಲೆ ಬೆನ್ನಲ್ಲೇ ಕೋಮು ದ್ವೇಷ ಬೆಳೆಯುವಂತಹ ಹೇಳಿಕೆ, ಸಚಿವ ಈಶ್ವರಪ್ಪನ ಇನ್ನೊಂದು ಎಡವಟ್ಟು

JANANUDI.COM NETWORK

ಕೊಲೆಯಾದ ಯುವಕ ಹರ್ಷ(21)

ಶಿವಮೊಗ್ಗದಲ್ಲಿ ಕಳೆದ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷ(21) ಎಂಬಾತನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದನು. ಕೂಡಲೇ ಹರ್ಷನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ
ಈ ಯುವಕನೊಬ್ಬನ ಹತ್ಯೆಯಾದ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕೋಮು ದ್ವೇಷ ಬೆಳೆಯಲು ಅವಕಾಶ ನೀಡುವಂತಹ ಬೇಜವಾಬ್ದಾರಿ ಹೇಳಿಕೆ ನೀಡಿ ಇನ್ನೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಹೀಗೆ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಎಂದು ಜನ ಅನ್ನುತಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಚಿವ ಈಶ್ವರಪ್ಪ, ಮುಸ್ಲಿಂ ಗೂಂಡಾಗಳೇ ಈ ಹತ್ಯೆ ನಡೆಸಿದ್ದಾರೆ ಎಂದು ಖಚಿತವಾಗಿ ಹೇಳುವ ಮೂಲಕ ಕೋಮು ದ್ವೇಷ ಬೆಳೆವಂತಹ ಹೇಳಿಕೆ ನೀಡಿದ್ದಾರೆ. ಮುಸಲ್ಮಾನ ಗೂಂಡಾಗಳೇ ಈ ಕೊಲೆ ಮಾಡಿದ್ದಾರೆ ಎಂದು ಖಡಾ ಖಂಡಿತವಾಗಿ ಹೇಳುತ್ತಾ, ಇಷ್ಟು ಧೈರ್ಯ ಮುಸಲ್ಮಾನ್ ಗೂಂಡಾಗಳಿಗೆ ಹೇಗೆ ಬಂತು? ಈ ಬಗ್ಗೆ ತನಿಖೆ ಆಗಬೇಕು. ಇದು ಶಿವಮೊಗ್ಗ ಮುಸಲ್ಮಾನರೇ, ಹೊರಗಿನವರೇ ಎಂಬುದು ತನಿಖೆ ಆಗಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.
ಇವರ ಇಂತಹ ಹೇಳಿಕೆಗೆ ಸಾಮಾಜಿಕ ಜಾಲಾತಾಣಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಹೀಗೆ ಸಚಿವ ಕೆ.ಎಸ್. ಈಶ್ವರಪ್ಪ ತಾನು ಸಚಿವನಾಗಲು ಆಯೋಗ್ಯ ಎಂಬಂತ್ತೆ ವರ್ತಿಸುತ್ತಾ ಇರುವುದು ಸತ್ಯವಾಗಿದೆ.