ಶ್ರಮಿಕರಿಗೆ ಸಾಲ ಕೊಡಲು ರಾಷ್ಟ್ರೀಕೃತ ಬ್ಯಾಂಕ್‌ಗಳು ಸತಾಯಿಸುತ್ತವೆ : ಶಾಸಕ ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ : ಶ್ರಮಿಕರಿಗೆ ಸಾಲ ಕೊಡಲು ರಾಷ್ಟ್ರೀಕೃತ ಬ್ಯಾಂಕ್‌ಗಳು ಹತ್ತಾರು ದಾಖಲೆ ಕೇಳಿ ವರ್ಷಾನುಗಟ್ಟಲೇ ಸತಾಯಿಸುತ್ತವೆ . ಸೂಟು ಬೂಟು ಹಾಕಿಕೊಂಡು ಇಂಗ್ಲಿಷ್‌ನಲ್ಲಿ ಮಾತನಾಡಿದದರೆ ಅವನ ಕೈಕುಲಕಿ ನೂರಾರು ಸಾವಿರ ಕೋಟಿ ರೂ ನೀಡುತ್ತವೆ .
10-20 ಸಾವಿರ ರೂ ಸಾಲ ಪಡೆದವರ ಮನೆ ಹರಾಜು ಹಾಕುವ ದೇಶದ ಪರಿಸ್ಥಿತಿ ಬದಲಾಯಿಸ ಬೇಕಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು .
ಪಟ್ಟಣದ ರಾಜಧಾನಿ ಮಂಡಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಶ್ರೀನಿವಾಸಪುರ ಶಾಖೆ , ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಿಂದ 102 ಮಹಿಳಾ ಸಂಘಗಳಿಗೆ 5.2 ಕೋಟಿ ರೂ ಸಾಲ ವಿತರಿಸಿ ಮಾತನಾಡಿ , ಸತತ 8 ವರ್ಷಗಳಿಂದ ಡಿಸಿಸಿ ಬ್ಯಾಂಕ್ ಮೂಲಕ ಸಾಲ ನೀಡಲಾಗುತ್ತಿದೆ .
ಹಿಂದೆ 35 ಸಾವಿರ ರೂ ಇದ್ದ ಸಾಲವನ್ನು ನಂತರ 50 ಸಾವಿರ ರೂ.ಗೆ ಏರಿಸಿ ಶೂನ್ಯ ಬಡ್ಡಿಯಲ್ಲಿ ಕೊಡಲಾಗುತ್ತದೆ . ಸಾಲ ಕೊಡುವಾಗ ನಿಮ್ಮನ್ನು ಬ್ಯಾಂಕ್ ಗೌರದಿಂದ ಕಾಣುತ್ತದೆ . ಹಾಗಾಗಿ ಪಡೆದ ಸಾಲ ಸಕಾಲಕ್ಕೆ ಪಾವತಿ ಮಾಡಿದಲ್ಲಿ ಇತರರಿಗೆ ಸಾಲ ಕೊಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು .
ಈ ಸಂದರ್ಭದಲ್ಲಿ ಎಂ ಎಲ್‌ ಸಿ ಎಂ.ಎಲ್.ಅನಿಲ್ ಕುಮಾರ್ , ಕಸಬಾ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಆಲಂಬಗಿರಿ ಅಯ್ಯಪ್ಪ , ಉಪಾಧ್ಯಕ್ಷೆ ಶಾಂತಮ್ಮ ,ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿರ್ದೇಶಕರಾದ ಶಬೀರ್ ಅಹ್ಮದ್ ,ದ್ವಾರಸಂದ್ರ , ನಾರಾಯಣಸ್ವಾಮಿ , ಮುನಿ ವೆಂಕಟಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ವಿ. ವೆಂಕಟರೆಡ್ಡಿ , ಎಸ್.ವಿ.ಸುಧಾಕರ್‌ , ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಧ್ಯಕ್ಷ ದಿಂಬಾಲ್ – ಅಶೋಕ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಕ್ಚರ್ ಅಕ್ಬರ್ ಷರೀಫ್ , ಪುರಸಭೆ ಸದಸ್ಯರಾದ ಕೆ. ಅನೀಸ್ ಅಹಮದ್ , ಇಪ್ತಿಕಾರ್ ಅಹ್ಮದ್ , ಕೊಂಡಸಂದ್ರ ಶಿವಾರೆಡ್ಡಿ , ಲಕ್ಷ್ಮಣರೆಡ್ಡಿ ಇತರರು ಉಪಸ್ಥಿತರಿದ್ದರು .