ವಿದಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿ ಆಯ್ಕೆಯಾದ ಡಾ|| ವೈ.ಎ ನಾರಾಯಣಸ್ವಾಮಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ವಿದಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿ ಆಯ್ಕೆಯಾದ ಡಾ|| ವೈ.ಎ ನಾರಾಯಣಸ್ವಾಮಿ ಪಟ್ಟಣಕ್ಕೆ ಆಗಮಿಸಿದ ವೇಳೆಯಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಅದ್ದೂರಿ ಸ್ವಾಗತ ಮಾಡಲಾಯಿತು.
ಪಟ್ಟಣದ ಇಂದ್ರಾಭವನ ವೃತ್ತದಲ್ಲಿ ತಾಲ್ಲೂಕು ಬಿಜೆಪಿ ಘಟಕದ ಮುಖಂಡರು ಡಾ|| ವೈ.ಎ ನಾರಾಯಣಸ್ವಾಮಿ ರವರನ್ನು ಅದ್ದೂರಿಯಾಗಿ ಸ್ವಾಗತಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಗೌರವಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಪರ ಕಾರ್ಯಕ್ರಮಗಳು ಮತ್ತು ಬಿಜೆಪಿ ಪಕ್ಷದ ವರಿಷ್ಠರಿಗೆ ಜೈಕಾರಗಳನ್ನು ಕೂಗಿ ಸಂಬ್ರಮಿಸಿ ವೈ.ಎ ನಾರಾಯಣಸ್ವಾಮಿ ರವರನ್ನು ಅಭಿ ನಂದಿಸಲಾಯಿತು.
ಈ ವೇಳೆಯಲ್ಲಿ ತಾಲ್ಲೂಕು ಬಿಜೆಪಿ ಅದ್ಯಕ್ಷ ಅಶೋಕ್ ರೆಡ್ಡಿ, ಖಾದಿ ನಿಗಮದ ಅದ್ಯಕ್ಷ ಜಯರಾಮಿರೆಡ್ಡಿ, ಮಧುಸೂದನ ರೆಡ್ಡಿ, ದರಕಾಸ್ತು ಸಮಿತಿ ಸದಸ್ಯ ಮಂಜುನಾಥ್ ರೆಡ್ಡಿ, ಜೆಸಿಬಿ ಅಶೋಕ್ ರೆಡ್ಡಿ, ಯಲ್ದೂರು ಪದ್ಮನಾಬ್, ಪುರಸಭಾ ನಾಮಿನಿ ಸದಸ್ಯರು ಮತ್ತಿತರರು ಹಾಜರಿದ್ದರು.