ಭಂಡಾರ್ಕಾರ್ಸ್ ಕಾಲೇಜಿನ ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ-2022

JANANUDI.COM NETWORK

ಕುಂದಾಪುರ: ಮಾರ್ಚ್ 30ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ-2022 ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿಶ್ವಸ್ಥರಾದ ಕೆ.ಶಾಂತಾರಾಮ್ ಪ್ರಭು ನಿವೃತ್ತ ಉಪನ್ಯಾಸಕರನ್ನು ಗೌರವಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ.ಲಲಿತಾದೇವಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾದ ಡಾ.ರೇಖಾ ವಿ.ಬನ್ನಾಡಿ ಮತ್ತು ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರೊ.ಸಂಧ್ಯಾ.ಜಿ.ಕೆ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮತ್ತು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಉನ್ನತ ಉದ್ಯೋಗ ನಿಮಿತ್ತ ತೆರಳಿದ ಉಪನ್ಯಾಸಕರಾದ ಗುರುದಾಸ ಪ್ರಭು ಮತ್ತು ಅಮರ್ ಸಿಕ್ವೆರಾ ಅವರನ್ನು ಗೌರವಿಸಲಾಯಿತು.
ಕಾಲೇಜಿನಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಶೈಕ್ಷಣಿಕ ಮತ್ತು ಶೈಕ್ಷಣಿಕೇತರÀ ಕ್ಷೇತ್ರದಲ್ಲಿ ವಿವಿಧ ಸಾಧನೆ ಮಾಡಿದವರನ್ನು ಗುರುತಿಸಲಾಯಿತು.
ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ-2022 ಪ್ರಯುಕ್ತ ನಡೆದ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಉಪನ್ಯಾಸಕರಿಗೆ ಬಹುಮಾನ ವಿತರಿಸಲಾಯಿತು.
ಅಧ್ಯಾಪಕರ ಸಂಘದ ಉಪಾಧ್ಯಕ್ಷರಾದ ಡಾ.ಸರೋಜ ಎಮ್. ಸ್ವಾಗತಿಸಿದರು. ಅಧ್ಯಾಪಕರ ಸಂಘದ ಕಾರ್ಯದರ್ಶಿ ಪ್ರಶಾಂತ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ಖಜಾಂಚಿ ದುರ್ಗಾಪ್ರಸಾದ್ ಮಯ್ಯ ವಂದಿಸಿದರು.