ತಾಲ್ಲೂಕಿನ ಅಭಿವೃದ್ಧಿಗಾಗಿ ರಾಜಕೀಯ ಬದಲಾವಣೆ ತರಬೇಕಾದ ನಿಟ್ಟಿನಲ್ಲಿ ಯುವ ಸಮುದಾಯ ಆಲೋಚಿಸಬೇಕು :ಗುಂಜೂರು ಆರ್.ಶ್ರೀನಿವಾಸ ರೆಡ್ಡಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಅಭಿವೃದ್ಧಿಗಾಗಿ ರಾಜಕೀಯ ಬದಲಾವಣೆ ತರಬೇಕಾದ ಅಗತ್ಯವಿದೆ. ಯುವ ಸಮುದಾಯ ಈ ನಿಟ್ಟಿನಲ್ಲಿ ಆಲೋಚಿಸಬೇಕು ಎಂದು ಮುಖಂಡ ಗುಂಜೂರು ಆರ್.ಶ್ರೀನಿವಾ ರೆಡ್ಡಿ ಹೇಳಿದರು.
ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಬ್ಯಾಗ್ ವಿತರಿಸಿ ಮಾತನಾಡಿ, ‘ರಾಜಕೀಯ ನಿಂತ ನೀರಾಗಬಾರದು. ತಾಲ್ಲೂಕಿ ಅಭಿವೃದ್ಧಿ ಕನಸು ಹೊತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಂದಿದ್ದೇನೆ’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜಶೇಖರರೆಡ್ಡಿ ಮುಖಂಡರಾದ ಮಹಮದ್ ಅಲಿ, ಶ್ರೀನಿವಾಸ್, ಜಾವಿದ್, ಅಕ್ಬರ್, ಶಂಷೀರ್, ಇರ್ಷಾದ್, ಶ್ರೀರಾಮ್, ಶಂಕರರೆಡ್ಡಿ ಇದ್ದರು.