ಗ್ರಾಮೀಣ ಪ್ರದೇಶದ ಯುವಕರು ಆಡೋಟಗಳಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶಕ್ಕೆ ಕೀರ್ತಿ ತರಬೇಕು : ಜಿ.ಕೆ.ವೆಂಕಟಶಿವಾರೆಡ್ಡಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಯುವಕರು ಆಡೋಟಗಳಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶಕ್ಕೆ ಕೀರ್ತಿ ತರಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಕ್ರೀಡಾಭಿಮಾನಿ ದಿವಂಗತ ವೆಂಕಟೇಶ್ ಅವರ ಜ್ಞಾಪಕಾರ್ಥ ಭಾನುವಾರ ಏರ್ಪಡಿಸಿದ್ದ ವಾಲೀಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆಗೆ ಸಹಕಾರಿ ಹಾಗೂ ಸಮಾಜದ ಎಲ್ಲ ಸಮುದಾಯದ ಜನರ ಮನಸ್ಸನ್ನು ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಕ್ರೀಡಾಪಟುಗಳು ಸೋಲು ಗೆಲವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಉತ್ತಮ ಪ್ರದರ್ಶನ ನೀಡುವುದರ ಮೂಲಕ ಕ್ರೀಡಾಭಿಮಾನಿಗಳ ಮನಸ್ಸಿಗೆ ಮುದ ನೀಡಬೇಕು. ಗ್ರಾಮೀಣ ಪ್ರದೇಶದ ಯುವ ಸಮುದಾಯ ಮೂಲ ಸೌಲಭ್ಯದ ಕೊರತೆಯಿಂದ ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿದಿರುವುದು ದುರದೃಷ್ಟಕರ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಶ್ರೀನಿವಾಸ್, ತೂಪಲ್ಲಿ ಆರ್.ನಾರಾಯಣಸ್ವಾಮಿ ಹಾಗೂ ಗ್ರಾಮಸ್ಥರು ಇದ್ದರು.