ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಸಭೆ ಕೋಲಾರದಲ್ಲಿ ಆಯೋಜಿಸಲಾಗಿತ್ತು

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ: ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಸಭೆಯನ್ನು ಕೋಲಾರದಲ್ಲಿ ಆಯೋಜಿಸಲಾಗಿತ್ತು. ಸಭೆಯಲ್ಲಿ ಹಿಂದಿ ಶಿಕ್ಷಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕೋಲಾರ ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಮಕೃಷ್ಣಪ್ಪ. ವಿ. ವಿ ವಹಿಸಿದ್ದರು ಹಾಗೂ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ. ಎಲ್, ಮುನಿವೆಂಕಟಸ್ವಾಮಿ, ಜಯಣ್ಣ, ಸೋಮಶೇಖರ್, ತೊರ್ನಹಳ್ಳಿ ವೇಣು ಇತರರು ಹಾಜರಿದ್ದರು.