ಕುಂದಾಪುರ ಪುರಸಭೆಯಿಂದ ವಿದ್ಯಾರ್ಥಿಗಳಿಗೆ ಯೋಜನಾ ಅರಿವು ಕಾರ್ಯಕ್ರಮ

JANANUDI.COM NETWORK


ಕುಂದಾಪುರ:ಕುಂದಾಪುರ ಪುರಸಭೆಯ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಹಾಗೂ ಆರ್‍ಡಿಎಸ್ ಸಂಸ್ಥೆ ಮತ್ತು ಸೈಂಟ್ ಮೇರಿಸ್ ಪ್ರೌಢಶಾಲೆಯ ನಿಸರ್ಗ ಇಕೋ ಕ್ಲಬ್ ಸಹಯೋಗದಲ್ಲಿ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣೆ ಮತ್ತು ಬಂಡವಾಳ ಹೂಡಿಕೆ ಕಾರ್ಯಕ್ರಮ ಜಲಸಿರಿ ಮತ್ತು ಸಮುದಾಯ ಜಾಗೃತಿ,ಭಾಗವಹಿಸುವಿಕೆ ಪುನರ್‍ರ್ವಸತಿ ಹಾಗೂ ಪುನರ್ ನಿರ್ಮಾಣ ಚಟುವಟಿಕೆಯ ಅಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯೋಜನಾ ಅರಿವು ಮೂಡಿಸುವ ಕಾರ್ಯಕ್ರಮ ಕುಂದಾಪುರದ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಜರುಗಿತು.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಸಹಾಯಕ ಅಭಿಯಂತಕ ಹರೀಶ್ ವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಸಮುದಾಯ ಅಭಿವೃದ್ದಿ ಸಹಾಯಕ ಮಾಲತೇಶ್ ಎಂ.ಎಚ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ವಹಿಸಿದ್ದರು.ಯೋಜನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸ್ಮಿತಾ ಸ್ವಾಗತಿಸಿದರು.ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.ಆರ್‍ಡಿಎಸ್ ಸಂಸ್ಥೆಯ ತಂಡದ ನಾಯಕಿ ಜ್ಯೋತಿ ವಂದಿಸಿದರು.