623 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ಪಿ.ಸಹನಾರನ್ನು ಚಿನ್ಮಯ ಮಿಷನ್‍ನ ಸ್ವಾಮಿ ಬ್ರಹ್ಮಾನಂದಜೀ ಸನ್ಮಾನಿಸಿದರು.

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ   ಸಂಪಾದಕರು : ಬರ್ನಾಡ್ ಡಿ’ಕೋಸ್ತಾ

ಕೋಲಾರದಲ್ಲಿ ಚಿನ್ಮಯ ವಿದ್ಯಾಲಯದ ಆಶ್ರಯದಲ್ಲಿ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ 623 ಅಂಕಗಳನ್ನು ಗಳಿಸಿ ಸಾಧನೆ ತೋರಿದ ಮುದುವಾಡಿ ಗ್ರಾಮದ ಡಿ.ಎನ್.ಫಣಿಕುಮಾರ್,ಜಯಲಕ್ಷ್ಮಿ ದಂಪತಿಗಳ ಪುತ್ರಿಯಾದ ಪಿ.ಸಹನಾರನ್ನು ಚಿನ್ಮಯ ಮಿಷನ್‍ನ ಸ್ವಾಮಿ ಬ್ರಹ್ಮಾನಂದಜೀ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು ಹಾಜರಿದ್ದರು.