ಕೋಲಾರ ನಗರಸಭೆ ಪೌರಾಯುಕ್ತರಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾದ ಎಸ್.ಪ್ರಸಾದ್ ಗೆ ಬೀಳ್ಕೊಡುಗೆ

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ      (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ)

ಕೋಲಾರ ನಗರಸಭೆ ಪೌರಾಯುಕ್ತರಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾದ ಎಸ್.ಪ್ರಸಾದ್ ರವರನ್ನು ನಗರಸಭೆ ಕಛೇರಿಯಲ್ಲಿ ನಡೆದ ಬಿಳ್ಕೋಡುಗೆ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಶ್ವೇತ ಶಬರೀಶ್ ರವರು ಶಾಲು ಹೊದಿಸಿ, ಆತ್ಮೀಯವಾಗಿ ಸನ್ಮಾನಿಸಿ, ಹಣ್ಣುಹಂಪಲು, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ವರ್ಗಾವಣೆಯಾದ ನಗರಸಭೆಯ ಅಧಿಕಾರಿಗಳಾದ ತ್ಯಾಗರಾಜ್, ರಮೇಶ್ ರವರನ್ನು ಸನ್ಮಾನಿಸಿ ಗೌರವಿಸಿದರು. ನಗರಸಭೆ ಉಪಾಧ್ಯಕ್ಷ ಅಸ್ಲಂ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಂಬರೀಶ್, ವಿಶ್ವೇಶ್ವರಯ್ಯ ಇಂಟರ್ ನಾಷನಲ್ ಶಾಲೆಯ ಕಾರ್ಯದರ್ಶಿ ಶಬರೀಶ್ ಯಾದವ್, ನಗರಸಭೆ ಸದಸ್ಯರಾದ ಮಂಜುನಾಥ್, ಹಿದಾಯತ್, ಸುರೇಶ್, ಸೇರಿದಂತೆ ನಗರಸಭೆ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.