ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ

ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರ ಇದರ 2021 – 22ರ ಸಾಲಿನ ಸಾಧಿಸಿರುವ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿ ಲಭಿಸಿತು.
ಆ.5 ರಂದು ಮಂಗಳೂರಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಜೋನ್ಸನ್ ಡಿ‌ಅಲ್ಮೇಡಾ, ಉಪಾಧ್ಯಕ್ಷರಾದ ಕಿರಣ್ ಮೇಲ್ವಿನ್ ಲೋಬೊ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೆಬಲ್ ಡಿ‌ಅಲ್ಮೇಡಾ ಉಪಸ್ಥಿತರಿದ್ದರು.


ಕುಂದಾಪುರದಲ್ಲಿ ಪ್ರಧಾನ ಕಛೇರಿ ಹೊಂದಿರುವ ರೋಜರಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಕುಂದಾಪುರ, ಬೈಂದೂರು, ಪಡುಕೋಣೆ, ಬಸ್ರೂರು, ಪಿಯುಸ್‌ನಗರ, ಗಂಗೊಳ್ಳಿ, ಸಂತೆಕಟ್ಟೆ, ಶಿರ್ವಾದಲ್ಲಿ ಶಾಖೆಗಳನ್ನು ಹೊಂದಿದ್ದು, ವರ್ಷದಿಂದ ವರ್ಷಕ್ಕೆ ಗಣನೀಯವಾದ ಪ್ರಗತಿಯನ್ನು ಸಾಧಿಸುತ್ತಿದೆ.