ವಸಂತ ಪ್ರೊಡಕ್ಷನ್ ಹೌಸ್ ಕುಂದಾಪುರ: ನಾಳೆ ಬಾಲವನದ ಜಾದೂಗಾರ ಕಿರು ಚಿತ್ರದ ಪೋಸ್ಟರ್ ಬಿಡುಗಡೆ


ವಸಂತ ಪ್ರೊಡಕ್ಷನ್ ಹೌಸ್ ಕುಂದಾಪುರ ನಿರ್ಮಾಣದ ಖ್ಯಾತ ಚಲನ ಚಿತ್ರ ನಿರ್ದೇಶಕ ಇ. ಎಮ್. ಅಶ್ರಫ್ ಕಥೆ ಬರೆದು ನಿರ್ದೇಶಿಸಿರುವ ಬಾಲವನದ ಜಾದೂಗಾರ ಕಿರು ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಆದಿತ್ಯವಾರ ಆ. 21 ರಂದು ನಡೆಯಲಿದೆ. ಡಾ. ಕೋಟ ಶಿವರಾಮ ಕಾರಂತರ ಕೃತಿಗಳು ಮಕ್ಕಳ ಮೇಲೆ ಬೀರುವ ಉತ್ತಮ ಪ್ರಭಾವದ ಹಿನ್ನಲೆಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನರೋಟರಿ ಲಕ್ಷೀ ನರಸಿಂಹ ಕಲಾ ಮಂದಿರದಲ್ಲಿ ಸಂಜೆ 4ಕ್ಕೆ ನಡೆಯುವ ಸಮಾರಂಭವನ್ನು ಸಹಾಯಕ ಆಯುಕ್ತರಾದ ಕೆ. ರಾಜು ಉದ್ಘಾಟಿಸಲಿದ್ದಾರೆ. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು ಕ್ಷೇತ್ರದ ಆಡಳಿತ ಧರ್ಮದರ್ಶಿ ಚಂದ್ರಶೇಖರ ಶೆಟ್ಟಿ ಕೆರಾಡಿ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ ಎ. ಎಸ್. ಎನ್. ಹೆಬ್ಬಾರ್, ಡಾ. ಕಾರಂತ ಪ್ರತಿಷ್ಠಾನ ಕೋಟದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್, ಶ್ರೀ ವೆಂಕಟರಮಣ ಶಿಕ್ಷಣ ಸಂಸ್ಥೆಯ ಸಂಚಾಲಕ ಕೆ. ರಾಧಾಕೃಷ್ಣ ಶೆಣೈ, ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ್, ಖ್ಯಾತ ನಿರ್ಮಾಪಕ ಮನ್ಸೂರ್ ಪಳ್ಳೂರ್, ನಮ್ಮ ಭೂಮಿಯ ಶಿವಾನಂದ ಶೆಟ್ಟಿ ಭಾಗವಹಿಸಲಿದ್ದಾರೆ. ಕುಂದಾಪುರ ತಾಲೂಕು ಕ.ಸಾ.ಪ. ಅಧ್ಯಕ್ಷ ಡಾ. ಉಮೇಶ್ ಪುತ್ರನ್, ಬಿ.ಇ.ಓ. ಅರುಣ್ ಕುಮಾರ್, ಮನೋವೈದ್ಯ ಡಾ. ಕೆ. ಎಸ್. ಕಾರಂತ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಸರ್ವರೂ ಪಾಲ್ಗೊಳ್ಳಬೇಕೆಂದು ನಿರ್ಮಾಪಕ ಕೆ. ಪಿ. ಶ್ರೀಶನ್ ವಿನಂತಿಸಿದ್ದಾರೆ.