ದೈಹಿಕ ಶಿಕ್ಷಕರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒತ್ತಡ ತನ್ನಿ:ಸಂಸದ ಮುನಿಸ್ವಾಮಿ ಅವರಿಗೆ ದೈಹಿಕ ಶಿಕ್ಷಕರ ಸಂಘ ಮನವಿ

ಕೋಲಾರ:- ದೈಹಿಕ ಶಿಕ್ಷಣ ಶಿಕ್ಷಕರ ವೃಂದ & ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶ ಜಾರಿ, ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ತರುವಂತೆ ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಚೌಡಪ್ಪ, ಜಿಲ್ಲಾಧ್ಯಕ್ಷ ವಿ.ಮುರಳಿಮೋಹನ್ ಸಂಸದ ಎಸ್.ಮುಜನಿಸ್ವಾಮಿ ಅವರಿಗೆ ಮನವಿ ಮಾಡಿದರು.
ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಕ್ರೀಡಾಕೂಟದ ಉದ್ಘಾಟನೆಗೆ ಆಗಮಿಸಿದ್ದ ಸಂಸದರಿಗೆ ಮನವಿ ನೀಡಿದ ಅವರು,
ಈ ಕುರಿತು ಹೇಳಿಕೆ ರಾಜ್ಯದ ದೈಹಿಕ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರವು 2006ರಲ್ಲಿ ಪ್ರೊ. ಎಲ್.ಆರ್.ವೈದ್ಯನಾಥನ್ ಅಧ್ಯಕ್ಷತೆಯಲ್ಲಿ 7 ಜನ ದೈಹಿಕ ಶಿಕ್ಷಣ ತಜ್ಞರನ್ನು ನೇಮಿಸಿ, ಆ ಸಮಿತಿ ನೀಡಿದ ವರದಿಯನ್ನು ಅನುಮೋದಿಸಿ 14 ಶಿಫಾರಸ್ಸು ಮಾಡಿತ್ತು.
ಆದರೆ ಸದರಿ ವರದಿಯಲ್ಲಿನ 14 ಅಂಶಗಳ ಪೈಕಿ 13 ಅಂಶಗಳನ್ನು ಜಾರಿಗೊಳಿಸಲಾಗಿದ್ದು, 14ನೇ ಅಂಶವಾದ ದೈಹಿಕ ಶಿಕ್ಷಣ ಶಿಕ್ಷಕರುಗಳ ಪದನಾಮವನ್ನು ಸಹ ಶಿಕ್ಷಕರು ಎಂದು ಪರಿಗಣಿಸಿ ಸಹ ಶಿಕ್ಷಕರಿಗೆ ದೊರೆಯುವ ಎಲ್ಲಾ ಸೌಲಭ್ಯವನ್ನು ದೈಹಿಕ ಶಿಕ್ಷಣ ಶಿಕ್ಷಕರಿಗೂ ನೀಡಲು ವಿಳಂಬವಾಗಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ತಿನ ಶಾಸಕರು ಸದನದ ಒಳಗೆ ಮತ್ತು ಹೊರಗೆ ವೃಂದ ಮತ್ತು ನೇಮಕಾತಿ ತಿದ್ದುಪಡಿ ಪ್ರಶ್ನೆ ಕೇಳಿದಾಗ ಇಲ್ಲಿಯ ತನಕ ಪ್ರತಿ ಬಾರಿಯೂ ಇಲಾಖೆಯಿಂದ ನೀಡುವ ಉತ್ತರ ಅಂತಿಮ ಹಂತದಲ್ಲಿದೆ ಎಂದು ಆದರೆ ಇಲ್ಲಿಯ ತನಕ ಸಚಿವ ಸಂಪುಟದ ಅನುಮೋದನೆ ಪಡೆದು, ಕರಡು ನಿಯಮಗಳನ್ನು ಪ್ರಕಟಿಸಿ ಆದೇಶ ಮಾಡಲಿಲ್ಲ ಈ ಕುರಿತು ಸಚಿವರ ಗಮನಕ್ಕೆ ತರಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಅನಿಲ್‍ಕುಮಾರ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಅಪ್ಪೇಗೌಡ,ಎಂ.ನಾಗರಾಜ್, ಮುನಿಯಪ್ಪ, ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.