ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ: ಕಿರಿಯ ರೆಡ್ ಕ್ರಾಸ್ ಘಟಕ ಉದ್ಘಾಟನೆ


ಕುಂದಾಪುರ:ರೆಡ್ ಕ್ರಾಸ್ ಒಂದು ಸಮಾಜಸೇವೆ ಸಂಸ್ಥೆಯಾಗಿದ್ದು ವಿದ್ಯಾರ್ಥಿಗಳು ರೆಡ್ ಕ್ರಾಸ್ ನಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಕುಂದಾಪುರ ರೆಡ್ ಕ್ರಾಸ್ ಚೇರ್ಮನ್ ಜಯಕರ್ ಶೆಟ್ಟಿ ಹೇಳಿದರು.
ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಕಿರಿಯ ರೆಡ್ ಕ್ರಾಸ್ ಘಟಕ ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಕಿರಿಯ ರೆಡ್ ಕ್ರಾಸ್ ಘಟಕದ ಅಧ್ಯಕ್ಷೆ ಕು.ಅರ್ಚನಾ ಸೇರಿದಂತೆ ಒಟ್ಟು 52 ವಿದ್ಯಾರ್ಥಿಗಳು ರೆಡ್ ಕ್ರಾಸ್ ಪ್ರತಿಜ್ಞೆ ಸ್ವೀಕರಿಸಿದರು.ಕುಂದಾಪುರ ಜೂನಿಯರ್ ರೆಡ್ ಕ್ರಾಸ್ ಸಂಯೋಜಕ ದಿನಕರ ಆರ್ . ಶೆಟ್ಟಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಡಾ.ಸೋನಿ ಡಿ’ಕೋಸ್ತಾ ಪ್ರಥಮ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ರೆಡ್ ಕ್ರಾಸ್ ಸಂಸ್ಥೆಯಿಂದ ಶಾಲೆಗೆ ಪ್ರಥ ಮ ಚಿಕಿತ್ಸಾ ಕಿಟ್, ವಿದ್ಯಾರ್ಥಿ ಗಳಿಗೆ ಮಾಸ್ಕ್ ವಿತರಿಸಿದರು.ಹಿರಿಯ ಶಿಕ್ಷಕ ಭಾಸ್ಕರ್ ಗಾಣಿಗ ಸ್ವಾಗತಿಸಿದರು.ಚಂದ್ರಶೇಖರ್ ಬೀಜಾಡಿ ವಂದಿಸಿದರು.ರೆಡ್ ಕ್ರಾಸ್ ಸಂಯೋಜಕ ಶಿಕ್ಷಕಿ ಸಿಸ್ಟರ್ ಚೇತನಾ ಕಾರ್ಯ ಕ್ರಮ ನಿರೂಪಿಸಿದರು.
ವಿದ್ಯಾರ್ಥಿಗಳು “ನಾನು ಸೇವೆ ಮಾಡುವೆ” ಎಂಬ ಕಿರುನಾಟಕ ಪ್ರದರ್ಶಿಸಿದರು