ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಬೆಳ್ಮಣ್ಣು ಎಸ್.ಕೆ. ಸಾಲ್ಯಾನ್ ಅವರಿಗೆ ಸನ್ಮಾನ

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ ಜರಗಿದ 22ನೇ ವರ್ಷದ ವಾರ್ಷಿಕೋತ್ಸವ ಮತ್ತು 16ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದ ವೇದಿಕೆಯಲ್ಲಿ ಬೆಳ್ಮಣ್ಣು ಶ್ರೀ ಕೃಷ್ಣ ಸಮೂಹ ಸಂಸ್ಥೆಗಳ ಮಾಲಕರಾದ ಎಸ್.ಕೆ.ಸಾಲ್ಯಾನ್ ಅವರನ್ನು ಸನ್ಮಾನಿಸಲಾಯಿತು.
ಕೊಡುಗೈ ದಾನಿಗಳು, ಪ್ರಗತಿಪರ ಹಿರಿಯ ಕೃಷಿಕರು, ಬೆಳ್ಮಣ್ಣು ಬ್ರಹ್ಮಶ್ರೀ ನಾರಾಯಣಗುರು ಸಮಾಜಸೇವಾ ಸಂಘದ ಗೌರವಾಧ್ಯಕ್ಷರು, ಮಕ್ಕೇರಿಬೈಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಪಳ್ಳಿ ಅದಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ರಜತ ಮಹೋತ್ಸವದ ಗೌರವಾಧ್ಯಕ್ಷರಾಗಿರುವ ಬೆಳ್ಮಣ್ಣು ಶ್ರೀ ಕೃಷ್ಣ ಸಮೂಹ ಸಂಸ್ಥೆಗಳ ಮಾಲಕರಾದ ಎಸ್.ಕೆ.ಸಾಲ್ಯಾನ್ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ನಂದಳಿಕೆ ಪ್ರಶಾಂತ್ ಪೂಜಾರಿ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಬೋಳ ರಘುವೀರ್ ಶೆಟ್ಟಿ, ಪೂವಾಧ್ಯಕ್ಷ ಪ್ರಕಾಶ್ ಆಚಾರ್ಯ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನಿಕಟ ಪೂರ್ವಾಧ್ಯಕ್ಷ ಹರೀಶ್ ಪೂಜಾರಿ, ಸದಸ್ಯರಾದ ಕೀರ್ತನ್ ಕುಮಾರ್ ಮೊದಲಾದವರಿದ್ದರು.