ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್:ಇಂಜಿನಿಯರ್ಸ್ ದಿನಾಚರಣೆ-ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯರವರ ಜನ್ಮದಿನಾಚರಣೆ

ನೆಹರು ಯುವ ಕೇಂದ್ರ ಉಡುಪಿ ಮತ್ತು ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ.) ಅಬ್ಬನಡ್ಕ ನಂದಳಿಕೆ ವತಿಯಿಂದ ಸಂಘದ ರಂಗಮಂದಿರದಲ್ಲಿ ಇಂಜಿನಿಯರ್ಸ್ ದಿನಾಚರಣೆ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಆಚರಿಸಲಾಯಿತು.
ಸಂಘದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ರವರು ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದವರು ಸರ್ ಎಂ. ವಿಶ್ವೇಶ್ವರಯ್ಯ ಅವರು ಪರಿಶ್ರಮದಿಂದ ರಾಜ್ಯದಲ್ಲಿ ಜಲಾಶಯ ನಿರ್ಮಾಣ ಮಾಡಲು ಸಾಧ್ಯವಾಯಿತು. ವಿಶ್ವೇಶ್ವರಯ್ಯ ಅವರು ಬುದ್ಧಿ ಶಕ್ತಿಯಿಂದ ರಾಜ್ಯದಲ್ಲಿ ಹಲವು ಯೋಜನೆಗಳು ಜಾರಿಯಾಗಿ ಬಡಜನರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರಿಗೆ ಅನುಕೂಲವಾಗಿದೆ. ಅಂತಹ ಮಹನೀಯರ ಆದರ್ಶ ಗುಣಗಳನ್ನು ಇಂದಿನ ಯುವ ಎಂಜಿನಿಯರ್ಗಳು ಅಳವಡಿಸಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು. 
ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸಂಘದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ, ನಿಕಟ ಪೂರ್ವಾಧ್ಯಕ್ಷರಾದ ಬೋಳ ಉದಯ ಅಂಚನ್, ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ, ಉಪಾಧ್ಯಕ್ಷರಾದ ಸುರೇಶ್ ಅಬ್ಬನಡ್ಕ, ಕೋಶಾಧಿಕಾರಿ ವೀಣಾ ಪೂಜಾರಿ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಸದಸ್ಯರಾದ ಪದ್ಮಶ್ರೀ ಪೂಜಾರಿ, ಕೀರ್ತನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.