ಪ್ರಧಾನಿ ಶ್ರೀ ನರೇಂದ್ರ ಮೋದಿ ಇವರ ಎಪ್ಪತ್ತೆರನೇ ಹುಟ್ಟು ಹಬ್ಬದ ಅಂಗವಾಗಿ ದೇಶದಾದ್ಯಂತ ರಕ್ತ ದಾನ ಶಿಬಿರ

ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿ ಇವರ ಎಪ್ಪತ್ತೆರನೇ ಹುಟ್ಟು ಹಬ್ಬದ ಅಂಗವಾಗಿ ದೇಶದಾದ್ಯಂತ ರಕ್ತ ದಾನ ಶಿಬಿರ ಆಯೋಜಿಸಲಾಯಿತು. ಭಾರತೀಯ ರೆಡ್ ಕ್ರಾಸ್‌ ಸಂಸ್ಥೆಯ ರಕ್ತ ನಿಧಿ ಕೇಂದ್ರ ದಲ್ಲಿ ಈದಿನ ಆಯೋಜಿಸಲಾದ ರಕ್ತ ದಾನ ಶಿಬಿರ ವನ್ನು ಶಾಸಕರಾದ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಗಾಟಿಸಿ ಉದ್ಘಾಟನಾ ಭಾಷಣ ಮಾಡಿದರು. ಸಭಾಪತಿ ಎಸ್ ಜಯಕರ ಶೆಟ್ಟಿ ಸರ್ವರಿಗೂ ಸ್ವಾಗತ ಕೋರಿದರು. ಸಭೆಯಲ್ಲಿ ಕರ್ಣಾಟಕ ಆಹಾರ ನಿಗಮದ ಉಪಾಧ್ಯಕ್ಷ ರಾದ ಕಿರಣ ಕುಮಾರ್ ಕೊಡ್ಗಿ, ಪುರಸಭಾ ಅಧ್ಯಕ್ಷರಾದ ವೀಣಾ ಮೆಂಡನ್, ಪ್ರಾಧಿಕಾರದ ಅದ್ಯಕ್ಷರಾದ ವಿಜಯ, ಶಂಕರ್ ಅಂಕದ ಕಟ್ಟೆ, ಪ್ರಜ್ವಲ್ ಶೆಟ್ಟಿ ಕಾಲ್ತೋಡು, ಸದಾನಂದ ಉಪ್ಪಿನಕುದ್ರು ಖಜಾಂಚಿ ಶಿವರಾಮ ಶೆಟ್ಟಿ, ಸದಸ್ಯರು ಗಳಾದ ಗಣೇಶ್ ಆಚಾರ್ಯ, ಡಾ. ಸೋನಿ, ಎ. ಮುತ್ತಯ್ಯ ಶೆಟ್ಟಿ, ಸೀತಾರಾಮ ನಕ್ಕತ್ತಾಯ, ಸದಾನಂದ ಶೆಟ್ಟಿ, ನಾರಾಯಣ ದೇವಾಡಿಗ, ದಿನಕರ ಶೆಟ್ಟಿ ಮತ್ತು ಸಂಪತ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ ವಂದನಾರ್ಪಣೆ ಗೈದರು.