ಕೋಲಾರ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಮತ್ತು ಡಿ.ವಿ.ಗುಂಡಪ್ಪನವರ ಪ್ರತಿಮೆಗಳನ್ನು ಸ್ಥಾಪಿಸಲು ಕೋರಿ ಮನವಿ ಮುಖ್ಯಮಂತ್ರಿಗಳಿಗೆ ಮನವಿ

ಮುಖಾಂತರ
ಮಾನ್ಯ ಜಿಲ್ಲಾಧಿಕಾರಿಗಳು
ಕೋಲಾರ ಜಿಲ್ಲೆ, ಕೋಲಾರ.

ಮಾನ್ಯರೇ,

    ವಿಷಯ : ಕೋಲಾರ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ಕರ್ನಾಟಕ 

ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿರವರ ಪ್ರತಿಮೆ ಸ್ಥಾಪಿಸಲು ಮತ್ತು ಕೋಲಾರ ನಗರದ ಡಿ.ವಿ.ಗುಂಡಪ್ಪ ಜಿಲ್ಲಾ ಗ್ರಂಥಾಲಯದ ಮುಂಭಾಗದಲ್ಲಿ ಡಿ.ವಿ.ಗುಂಡಪ್ಪನವರ ಪ್ರತಿಮೆ ಸ್ಥಾಪಿಸಲು ಕೋರಿ ಮನವಿ.


ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪ್ರಥಮ ಮುಖ್ಯಮಂತ್ರಿಯಾದ ಕೋಲಾರ ಜಿಲ್ಲೆಯ, ಬೇತಮಂಗಲ ಹೋಬಳಿ ಕ್ಯಾಸಂಬಳ್ಳಿಯ ಕೆ.ಸಿ.ರೆಡ್ಡಿಯವರನ್ನು ನಮ್ಮ ಜಿಲ್ಲೆಯವರು ಎಂದು ಹೇಳಿಕೊಳ್ಳುವುದು ಹೆಮ್ಮಯ ವಿಷಯವಾಗಿದೆ. ಇಂತಹ ವ್ಯಕ್ತಿಯ ಪ್ರತಿಮೆಯು ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ ಸ್ಥಾಪನೆ ಮಾಡದಿರುವುದು ಸಹ ಬೇಸರದ ಸಂಗತಿ. ಜಿಲ್ಲಾಡಳಿತ ಕಛೇರಿಯ ಮುಂಭಾಗದಲ್ಲಿ ಕೆ.ಸಿ.ರೆಡ್ಡಿಯವರ ಪ್ರತಿಮೆಯನ್ನು ಸ್ಥಾಪಿಸಿ ಅವರಿಗೆ ಗೌರ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಅದೇ ರೀತಿ ಡಿ.ವಿ.ಜಿ ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು. ಮೂಲತಹ ಕೋಲಾರ ಜಿಲ್ಲೆಯ ಮುಳಬಾಗಿಲಿನ ಇವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅಪಾರ. ಕೋಲಾರದ ಡಿ.ವಿ. ಗುಂಡಪ್ಪನವರ ಹೆಸರನ್ನು ಜಿಲ್ಲಾ ಗ್ರಂಥಾಲಯಕ್ಕೆ ಇಡಲಾಗಿದೆ. ಸದರಿ ಗ್ರಂಥಾಲಯದ ಮುಂಭಾಗದಲ್ಲಿ ಡಿ.ವಿ.ಗುಂಡಪ್ಪನವರ ಪ್ರತಿಯನ್ನು ಸ್ಥಾಪಿಸಲು ತಮ್ಮಲ್ಲಿ ಈ ಮೂಲಕ ಕೋರುತ್ತೇವೆ.
ವಂದನೆಗಳೊಂದಿಗೆ,
ಇಂತಿ ತಮ್ಮ ವಿಶ್ವಾಸಿಗಳು,
ದಿನಾಂಕ :
ಸ್ಥಳ : ಕೋಲಾರ

ಮುಖಾಂತರ
ಮಾನ್ಯ ಜಿಲ್ಲಾಧಿಕಾರಿಗಳು
ಕೋಲಾರ ಜಿಲ್ಲೆ, ಕೋಲಾರ.




ಸ್ಥಳ : ಕೋಲಾರ