ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚೆಸ್ ಸಾಧಕರಿಗೆ ಸನ್ಮಾನ

ಕುಂದಾಪುರ-ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ, ನಾರಾಯಣಗುರು ಸಭಾಭವನದಲ್ಲಿ ಎರಡನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾಟ ಜರುಗಿತು.

ಉದ್ಘಾಟನಾ ಸಮಾರಂಭದಲ್ಲಿ, ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸ್ಪರ್ಧಿಸಲು ಕರ್ನಾಟಕದಿಂದ ಆಯ್ಕೆಯಾದ ಅವನಿ ಆಚಾರ್ಯ ಉಡುಪಿ ಮತ್ತು ಪ್ರಗತಿ ನಾಯಕ್ ಬ್ರಹ್ಮಾವರ ಇವರನ್ನು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಂದಾಪುರದ ಡಿ.ವೈ‌.ಎಸ್.ಪಿ ಶ್ರೀಕಾಂತ್,ಕುಂದಾಪುರ ಪುರಸಭೆ ಅಧ್ಯಕ್ಷೆ ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್,ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಎಸ್.ಪೂಜಾರಿ,ಡಿಜಿಫ್ಲಿಕ್ ಇನ್ಷುರೆನ್ಸ್ ಕಂಪೆನಿಯ ಸಿ.ಇ.ಎ,ರಂಜನ್ ನಾಗರಕಟ್ಟೆ ಸಕ್ಸಸ್ ಅಕಾಡೆಮಿಯ ಸಂಸ್ಥಾಪಕ ರಂಜನ್ ನಾಗರಕಟ್ಟೆ,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ,ಉಡುಪಿ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾದ ಅಮಿತ್ ಕುಮಾರ್ ಶೆಟ್ಟಿ,ಚೀಫ್ ಆರ್ಬಿಟರ್ ವಸಂತ್. . ಬಿ.ಹೆಚ್. ಮತ್ತಿತರರು ಉಪಸ್ಥಿತರಿದ್ದರು.