ಕುಂ. ಶ್ರೀ ವೆಂಕಟರಮಣ ಪ್ರಭು ಚಾರಿಟೇಬಲ್ ಟ್ರಸ್ಟ್, ಕಾವೇರಿ ಆಸ್ಪತ್ರೆ, ರೋಟರಿ ಕ್ಲಬ್ ಕುಂದಾಪುರ ದ. ವತಿಯಿಂದ ಶ್ರೀ ಕೃಷ್ಣ ಸೇವಾ ಕೇಂದ್ರಕ್ಕೆ ಒಕ್ಸಿಜನ್ ಕಾನ್ಸಂಟ್ರೆಟರ್ ಹಸ್ತಾಂತರ

ಕುಂಭಾಶಿ ಶ್ರೀ ವೆಂಕಟರಮಣ ಪ್ರಭು ಚಾರಿಟೇಬಲ್ ಟ್ರಸ್ಟ್, ಕಾವೇರಿ ಆಸ್ಪತ್ರೆ ಹಾಗೂ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ಅಶಕ್ತರಿಗೆ ಆರೈಕೆ ನೀಡುವ ಹೆಬ್ರಿಯ ಶ್ರೀ ಕೃಷ್ಣ ಸೇವಾ ಕೇಂದ್ರಕ್ಕೆ ಒಕ್ಸಿಜನ್ ಕಾನ್ಸಂಟ್ರೆಟರ್ ಹಸ್ತಾಂತರಿಸಲಾಯಿತು. ರೋಟರಿ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಮಾಜಿ ಅಧ್ಯಕ್ಷರಾದ ರೋ. ಶಾಂತರಾಮ ಪ್ರಭು, ಕಾರ್ಯದರ್ಶಿ ರೋ. ಸಚಿನ್ ನಕ್ಕತ್ತಾಯ, ರೋ. ಸುರೇಖಾ ಪುರಾಣಿಕ, ಹಾಗೂ ಹೆಬ್ರಿಯ ಶ್ರೀ ಕೃಷ್ಣ ಸೇವಾ ಕೇಂದ್ರದ ಡಾ. ಭಾರ್ಗವಿ ಐತಾಳ ಉಪಸ್ಥಿತರಿದ್ದರು.