ಜೇಸಿಐ ಬೆಳ್ಮಣ್ಣು : ಜೇಸಿ. ವೀಣೇಶ್ ಅಮೀನ್ ಅವರಿಗೆ ಪೂರ್ವಾಧ್ಯಕ್ಷರುಗಳಿಂದ ಅಭಿನಂದನಾ ಸನ್ಮಾನ


ಅಂತರಾಷ್ಟ್ರೀಯ ಭಾರತೀಯ ಜೇಸಿಐನ ವಲಯ ಹದಿನೈದರ ಪ್ರತಿಷ್ಠಿತ ಘಟಕ ಬೆಳ್ಮಣ್ಣು ಜೇಸಿಐನ 43ನೇ ಪದಗ್ರಹಣ ಸಮಾರಂಭದಲ್ಲಿ ನಿರ್ಗಮನ ಅಧ್ಯಕ್ಷರಾದ ಜೇಸಿ. ವೀಣೇಶ್ ಅಮೀನ್ ಅವರಿಗೆ ಬೆಳ್ಮಣ್ಣು ಜೇಸಿಐ ಘಟಕದ ಪೂರ್ವಾಧ್ಯಕ್ಷರುಗಳಿಂದ ಅಭಿನಂದನಾ ಸನ್ಮಾನವನ್ನು ಬೆಳ್ಮಣ್ಣು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆಸಲಾಯಿತು.
ಬೆಳ್ಮಣ್ಣು ಜೇಸಿಐನ ನೂತನ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ವಹಿಸಿದ್ದರು. ಕರ್ನಾಟಕ ಮೀನುಗಾರಿಕಾ ನಿಗಮ ಮಂಡಳಿಯ ನಿರ್ದೇಶಕರಾದ ಕಟಪಾಡಿ ಗೀತಾಂಜಲಿ ಸುವರ್ಣ, ಮೈಸೂರು ಎಸ್.ಐ.ಆರ್.ಡಿ. ತರಬೇತಿ ಸಂಯೋಜಕರಾದ ಸುಧಾಮಣಿ ಜೇಸಿಐ ವಲಯ 15ರ ನಿಯೋಜಿತ ವಲಯಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬೆಳ್ಮಣ್ಣು ಜೇಸಿಐ ಘಟಕದ ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅಭಿನಂದನಾ ಭಾಷಣ ಮಾಡಿದರು.
ವೇದಿಕೆಯಲ್ಲಿ ಕಾರ್ಯದರ್ಶಿ ಸರಿತಾ ದಿನೇಶ್ ಸುವರ್ಣ, ಲೇಡಿ ಜೇಸಿ ಸಂಯೋಜಕಿ ಸೌಜನ್ಯ ಸತೀಶ್ ಕೋಟ್ಯಾನ್, ಜೂನಿಯರ್ ಜೇಸಿ ಅಧ್ಯಕ್ಷ ಕೀರ್ತನ್ ಪೂಜಾರಿ ಹಾಗೂ ಪೂರ್ವಾಧ್ಯಕ್ಷರುಗಳು ವೇದಿಕೆಯಲ್ಲಿದ್ದರು.