ಹೋಲಿ ರೋಜರಿ ಕಿಂಡರ್ ಗಾರ್ಟನ್ ಸ್ಕೂಲ್: ಶಿಕ್ಷಕ ರಕ್ಷಕ ಸಭೆಯಲ್ಲಿ ಮಕ್ಕಳ ಪಾಲನೆ ಬಗ್ಗೆ ತಿಳುವಳಿಕೆ ಕಾರ್ಯಕ್ರಮ

ಕುಂದಾಪುರ,ನ.25; ಕೆಲವು ದಿನಗಳ ಹಿಂದೆ ಕುಂದಾಪುರ ಹೋಲಿ ರೋಜರಿ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಶಿಕ್ಷಕ ರಕ್ಷಕ ಮತ್ತು ವಿದ್ಯಾರ್ಥಿಗಳ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ವಹಿಸಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳ ರಕ್ಷಕರಿಗೆ ತಿಳುವಳಿಕೆ ನೀಡಿದರು.

    ಸಣ್ಣ ಮಕ್ಕಳ ಪಾಲನೆ ಬಗ್ಗೆ ಡಾ|ಸೋನಿ ಡಿಕೋಸ್ತಾ “ಮಕ್ಕಳು ಚಿಕ್ಕರಿರುವಾಗಲೇ ಉತ್ತಮ ಸಂಸ್ಕಾರವನ್ನು ಕಲಿಸುವುದು, ಮಗುವಿಗೆ ಅರಿವಿನ ಶಕ್ತಿಯನ್ನು ಹೆಚ್ಚಿಸಲು ಪ್ರಯತ್ನಿಸುವುದು, ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಪ್ರಯತ್ನ ಪಡುವುದು, ಹಾಗೇ ಮಕ್ಕಳಲ್ಲಿ ದೇವ ಭಕ್ತಿಯನ್ನು ಹೇಳಿಕೋಡುವುದು, ಗುರು ಹಿರಿಯರಿಗೆ ಗೌರವನ್ನು ನೀಡುವಂತೆ ಮಕ್ಕಳನ್ನು ಪಾಲಿಸಬೇಕು” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಕ್ಷಕರು, ವಿದ್ಯಾರ್ಥಿಗಳು ಮತ್ತು ಶಾಲೆಯ ಶಿಕ್ಷಕರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.

     ಶಾಲೆಯ ಮುಖ್ಯ ಶಿಕ್ಷಕಿ ಶೈಲಾ ಡಿಆಲ್ಮೇಡಾ ಪ್ರಸ್ತಾವಿಸಿ ಸ್ವಾಗತಿಸಿದರು.