ದಳಸನೂರು ಗ್ರಾಮಪಂಚಾಯಿತಿ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೊಡಿಚೆರುವು ಶಿವಾರೆಡ್ಡಿ ಅವಿರೋಧವಾಗಿ ಆಯ್ಕೆ

ಶ್ರೀನಿವಾಸಪುರ 1 : ತಾಲೂಕಿನ ದಳಸನೂರು ಗ್ರಾಮಪಂಚಾಯಿತಿ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೊಡಿಚೆರುವು ಶಿವಾರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದಳಸನೂರು ಗ್ರಾಮಪಂಚಾಯತಿಗೆ ಸಂಬಂದಿಸಿದಂತೆ ಒಟ್ಟು 16 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 11 ಸದಸ್ಯರಿದ್ದು, ಜೆಡಿಎಸ್ ಬೆಂಬಲಿತ 5 ಸದಸ್ಯರು ಇದ್ದಾರೆ. ಈ ಹಿಂದೆ ಇದ್ದ ಉಪಾಧ್ಯಕ್ಷರಾಗಿ ವಿ.ಜಗದೀಶ್ ಕಾರ್ಯನಿರ್ವಹಿಸಿ ರಾಜಿನಾಮೆಯಿಂದ ತೆರವುಗೊಂಡಿದ್ದ ಉಪಾಧ್ಯಕ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಗೆ ಕೊಡಿಚೆರುವು ಶಿವಾರೆಡ್ಡಿ ಏಕೈಕ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಉಪಾಧ್ಯಕ್ಷರಾಗಿ ಶಿವಾರೆಡ್ಡಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ರೇಷ್ಮೆ ಇಲಾಖೆ ನಿರ್ದೇಶಕ ಕೃಷ್ಣಪ್ಪ ತಿಳಿಸಿದರು.
ರಾಜ್ಯ ಮಾವು ಮಂಡಲಿ ಮಾಜಿ ಅಧ್ಯಕ್ಷ ದಳಸನೂರು ಗೋಪಾಲಕೃಷ್ಣ ಮಾತನಾಡಿ ಎಲ್ಲಾ ಸದಸ್ಯರು ಒಮ್ಮತದಿಂದ ಪಂಚಾಯಿತಿ ಅಭಿವೃದ್ಧಿಗೆ ಸಹಕರಿಸಬೇಕು. ಪಕ್ಷವನ್ನು ಬೆಳಸುವ ನಿಟ್ಟಿನಲ್ಲಿ ಪಂಚಾಯಿತಿಯ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದರು. ಅಧಿಕಾರ ಬರುವುದು ಎಲ್ಲರ ಹಕ್ಕು ಅದೇ ರೀತಿಯಾಗಿ ಅಧಿಕಾರವನ್ನು ನಿಭಾಯಿಸಿ, ನಿರ್ವಹಿಸುವ ಜವಾಬ್ದಾರಿ ವಹಿಸಬೇಕು. ಪಂಚಾಯಿತಿವತಿಯಂದ ಸಿಗುವಂತಹ ಸೌಲಭ್ಯಗಳನ್ನು ಪಕ್ಷಾತೀತವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವಂತೆ ಮಾಡಿ ನಿಮ್ಮ ನಾಯಕತ್ವವನ್ನು ಬೆಳಸಿಕೊಳ್ಳಬೇಕು.
ಸಿಗುವಂತಹ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳದೇ, ಸಿಗುವಂತಹ ಅಧಿಕಾರವನ್ನು ಸದ್ಭಳಕೆ ಮಾಡಿಕೊಂಡು ನಾಯಕತ್ವವು ನೀವು ಮಾಡುವಂತಹ ಕೆಲಸ ಕಾರ್ಯಗಳ ಮೇಲೆ ಬೆಳೆಯುತ್ತದೆ. ಜನರಿಗೆ ಬೇಕಾದ ಸೌಲಭ್ಯಗಳ ಕಾಲಕಾಲಕ್ಕೆ ನೀಡುವಂತೆ ಸದಸ್ಯರಿಗೆ ಸಲಹೆ ನೀಡಿದರು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶ್ರೀನಿವಾಸಪುರ ಪೊಲೀಸರು ಬಂದೊಬಸ್ತು ಮಾಡಿದ್ದರು.
ಪಿಡಿಒ ವಿಜಯಮ್ಮ, ಗ್ರಾ.ಪಂ ಅಧ್ಯಕ್ಷೆ ಸರಸ್ವತಮ್ಮ, ರೈತ ಮುಖಂಡ ವೀರಭದ್ರಸ್ವಾಮಿ, ಮುಖಂಡರಾದ ಆದಿನಾರಾಯಣಶೆಟ್ಟಿ, ಪಾಳ್ಯ ಗೋಪಾಲರೆಡ್ಡಿ, ವೆಂಕಟೇಶ್, ಹರಿ, ವೀರಭದ್ರಗೌಡ ಇದ್ದರು.