ವಿಶೇಷ ಚೇತನ ಮಕ್ಕಳು ಕೀಳರಿಮೆ ಬಿಟ್ಟು ಸಾಧನೆಯ ಹಾದಿಯಲ್ಲಿ ಸಾಗಬೇಕು : ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ

ಶ್ರೀನಿವಾಸಪುರ: ವಿಶೇಷ ಚೇತನ ಮಕ್ಕಳು ಕೀಳರಿಮೆ ಬಿಟ್ಟು ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಮಾನ್ಯತೆ ಇದೆ. ವಿಶೇಷ ಚೇತನರೂ ಸಹ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
ಈಗ ವಿಶೇಷ ತರಬೇತಿ ಹಾಗೂ ವೈಜ್ಞಾನಿಕ ಉಪಕರಣಗಳ ಮೂಲಕ ದೈಹಿಕ ನ್ಯೂನ್ಯತೆ ಕಡಿಮೆ ಮಾಡುವ ಅವಕಾಶ ಇದೆ. ಅಂಥ ಮಕ್ಕಳಿಗೆ ಸರ್ಕಾರ ವಿಶೇಷ ನೆರವು ನೀಡುತ್ತಿದೆ. ಅದೆಲ್ಲವನ್ನೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಬಿಆರ್‍ಸಿ ವಸಂತ, ಬಿಆರ್‍ಪಿ ಚಂದ್ರಪ್ಪ, ಚೌಡರೆಡ್ಡಿ, ಡಾ. ಮಂಜುನಾಥ್, ಪದ್ಮ, ಮುಖ್ಯ ಶಿಕ್ಷಕಿ ವಿಜಯಕುಮಾರಿ, ಸಿಆರ್‍ಪಿ ರಾಧಾಕೃಷ್ಣ, ನಾರಾಯಣಸ್ವಾಮಿ ಇದ್ದರು.